ಕೋಲಾರ: ಮುಂದಿನ ಜೂನ್ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅವರಿಗೆ ಅವಕಾಶ ನೀಡಬೇಕು ಒಂದು ವೇಳೆ ಕಿರಿಯರನ್ನು ಪರಿಗಣಿಸುವುದಾದರೆ ನನ್ನನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಹೆಚ್ ಮುನಿಯಪ್ಪ ಅವರೊಂದಿಗೆ ಭೇಟಿ ಮಾಡಿ ಮನವಿ ಮಾಡಿದರು.
ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಸಂಸ್ಥೆಯ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವುದು ಅಗತ್ಯವಾಗಿದೆ. ರೈತರ ಪರ ಹೋರಾಟಗಳ ಮೂಲಕವೇ ತಾಲೂಕು ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಅವರ ಪರಿಶ್ರಮದಿಂದ ಬೆಳೆದು ಬಂದು ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಕಳೆದ ಬಾರಿ ಸಿಎಂ ಆಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಕೋಲಾರ ಕ್ಷೇತ್ರವನ್ನು ನಿಮಗೆ ಬಿಟ್ಟು ಕೊಟ್ಟಿದ್ದರು. ಕೊನೆ ಗಳಿಗೆಯಲ್ಲಿ ನೀವು ಸ್ಪರ್ಧೆ ಮಾಡಲಿಲ್ಲ ಬೇರೆಯವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅದರಿಂದಲೇ ಶ್ರೀನಿವಾಸಗೌಡರಿಗೆ ಒಂದು ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು
ಒಂದು ವೇಳೆ ಕಾಂಗ್ರೆಸ್ ಪಕ್ಷವು ಕಿರಿತನದ ಆಧಾರದಲ್ಲಿ ಅವಕಾಶ ನೀಡುವುದಾದರೆ ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಇದರಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾಂಗ್ರೆಸ್ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ. ನಾನು ಕೂಡ ಮೂರು ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಕಾಂಕ್ಷೆ ಯಾಗಿದ್ದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕೆಎಚ್ ಮುನಿಯಪ್ಪ ಏಳು ಬಾರಿ ಗೆಲುವು ಸಾಧಿಸಲು ಪ್ರಮುಖವಾಗಿ ಪಾತ್ರವನ್ನು ವಹಿಸಿದ್ದೇನೆ. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷನಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ, ನಗರಸಭೆ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ನನ್ನ ಸೇವಾ ಹಿರಿತನವನ್ನು ಪರಿಗಣಿಸಿ ಮುಂದೆ ನಡೆಯುವ ಎಂಎಲ್ಸಿ ಸ್ಥಾನಗಳಿಗೆ ನನ್ನನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…