ಕೋಲಾರ: ಮುಂದಿನ ಜೂನ್ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅವರಿಗೆ ಅವಕಾಶ ನೀಡಬೇಕು ಒಂದು ವೇಳೆ ಕಿರಿಯರನ್ನು ಪರಿಗಣಿಸುವುದಾದರೆ ನನ್ನನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಹೆಚ್ ಮುನಿಯಪ್ಪ ಅವರೊಂದಿಗೆ ಭೇಟಿ ಮಾಡಿ ಮನವಿ ಮಾಡಿದರು.
ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಸಂಸ್ಥೆಯ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವುದು ಅಗತ್ಯವಾಗಿದೆ. ರೈತರ ಪರ ಹೋರಾಟಗಳ ಮೂಲಕವೇ ತಾಲೂಕು ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಅವರ ಪರಿಶ್ರಮದಿಂದ ಬೆಳೆದು ಬಂದು ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಕಳೆದ ಬಾರಿ ಸಿಎಂ ಆಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಕೋಲಾರ ಕ್ಷೇತ್ರವನ್ನು ನಿಮಗೆ ಬಿಟ್ಟು ಕೊಟ್ಟಿದ್ದರು. ಕೊನೆ ಗಳಿಗೆಯಲ್ಲಿ ನೀವು ಸ್ಪರ್ಧೆ ಮಾಡಲಿಲ್ಲ ಬೇರೆಯವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅದರಿಂದಲೇ ಶ್ರೀನಿವಾಸಗೌಡರಿಗೆ ಒಂದು ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು
ಒಂದು ವೇಳೆ ಕಾಂಗ್ರೆಸ್ ಪಕ್ಷವು ಕಿರಿತನದ ಆಧಾರದಲ್ಲಿ ಅವಕಾಶ ನೀಡುವುದಾದರೆ ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಇದರಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾಂಗ್ರೆಸ್ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ. ನಾನು ಕೂಡ ಮೂರು ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಕಾಂಕ್ಷೆ ಯಾಗಿದ್ದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕೆಎಚ್ ಮುನಿಯಪ್ಪ ಏಳು ಬಾರಿ ಗೆಲುವು ಸಾಧಿಸಲು ಪ್ರಮುಖವಾಗಿ ಪಾತ್ರವನ್ನು ವಹಿಸಿದ್ದೇನೆ. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷನಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ, ನಗರಸಭೆ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ನನ್ನ ಸೇವಾ ಹಿರಿತನವನ್ನು ಪರಿಗಣಿಸಿ ಮುಂದೆ ನಡೆಯುವ ಎಂಎಲ್ಸಿ ಸ್ಥಾನಗಳಿಗೆ ನನ್ನನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…