ಕೋಲಾರ: ಮುಂದಿನ ಜೂನ್ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅವರಿಗೆ ಅವಕಾಶ ನೀಡಬೇಕು ಒಂದು ವೇಳೆ ಕಿರಿಯರನ್ನು ಪರಿಗಣಿಸುವುದಾದರೆ ನನ್ನನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಹೆಚ್ ಮುನಿಯಪ್ಪ ಅವರೊಂದಿಗೆ ಭೇಟಿ ಮಾಡಿ ಮನವಿ ಮಾಡಿದರು.
ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಸಂಸ್ಥೆಯ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವುದು ಅಗತ್ಯವಾಗಿದೆ. ರೈತರ ಪರ ಹೋರಾಟಗಳ ಮೂಲಕವೇ ತಾಲೂಕು ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಅವರ ಪರಿಶ್ರಮದಿಂದ ಬೆಳೆದು ಬಂದು ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಕಳೆದ ಬಾರಿ ಸಿಎಂ ಆಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಕೋಲಾರ ಕ್ಷೇತ್ರವನ್ನು ನಿಮಗೆ ಬಿಟ್ಟು ಕೊಟ್ಟಿದ್ದರು. ಕೊನೆ ಗಳಿಗೆಯಲ್ಲಿ ನೀವು ಸ್ಪರ್ಧೆ ಮಾಡಲಿಲ್ಲ ಬೇರೆಯವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅದರಿಂದಲೇ ಶ್ರೀನಿವಾಸಗೌಡರಿಗೆ ಒಂದು ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು
ಒಂದು ವೇಳೆ ಕಾಂಗ್ರೆಸ್ ಪಕ್ಷವು ಕಿರಿತನದ ಆಧಾರದಲ್ಲಿ ಅವಕಾಶ ನೀಡುವುದಾದರೆ ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಇದರಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾಂಗ್ರೆಸ್ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ. ನಾನು ಕೂಡ ಮೂರು ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಕಾಂಕ್ಷೆ ಯಾಗಿದ್ದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕೆಎಚ್ ಮುನಿಯಪ್ಪ ಏಳು ಬಾರಿ ಗೆಲುವು ಸಾಧಿಸಲು ಪ್ರಮುಖವಾಗಿ ಪಾತ್ರವನ್ನು ವಹಿಸಿದ್ದೇನೆ. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷನಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ, ನಗರಸಭೆ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ನನ್ನ ಸೇವಾ ಹಿರಿತನವನ್ನು ಪರಿಗಣಿಸಿ ಮುಂದೆ ನಡೆಯುವ ಎಂಎಲ್ಸಿ ಸ್ಥಾನಗಳಿಗೆ ನನ್ನನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…