Categories: ಕೋಲಾರ

ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಪ್ರಾರಂಭಿಸದಂತೆ ಧರಣಿ

ಕೋಲಾರ: ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಬಳಿ ನೂತನವಾಗಿ ಪ್ರಾರಂಭವಾಗಿರುವ ಎಂಎಸ್ಐಎಲ್ ಮದ್ಯ ಮಾರಾಟದ ಮಳಿಗೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಬುಧವಾರ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮದಿಂದ ಮೆರವಣಿಗೆ ಮೂಲಕ ಹೋಗಿ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಭಾರತೀಯ ದಲಿತ ಸೇನೆ ರಾಜ್ಯ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭ ಮಾಡಿ ಜನತೆಯನ್ನು ಕುಡುಕರನ್ನಾಗಿ ಮಾಡುತ್ತಿದೆಯೆಂದು ದೂರಿದರು.

ಕಳೆದ ಆರು ತಿಂಗಳ  ಹಿಂದೆ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಪ್ರಾರಂಭ ಮಾಡಿದಾಗಲೂ ಗಲಾಟೆ ಹಾಗೂ ಪ್ರತಿಭಟನೆ ಮಾಡಿ ಮುಚ್ಚಿಸಿದ್ದು ಮತ್ತೆ ಪ್ರಾರಂಭ ಮಾಡಿರುವುದು ಖಂಡನೀಯ, ಈ ರಸ್ತೆಯಲ್ಲಿ ಕೆಲಸಕ್ಕೆ ಹೋಗುವ ಹೆಣ್ಣುಮಕ್ಕಳು, ಗೃಹಣಿಯರು ಹಾಗೂ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ ಈ ರಸ್ತೆಯಲ್ಲಿ ಮದ್ಯದ ಮಳಿಗೆ ಪ್ರಾರಂಭ ಮಾಡಿದರೆ ತೊಂದರೆ ಆಗುತ್ತದೆಯೆಂದು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರ್ ಹರ್ಷವರ್ಧನ್, ಪ್ರತಿಭಟನೆಕಾರರಿಂದ ಮನವಿ ಪಡೆದು ಕಡತಗಳ ಪರಿಶೀಲನೆ ಮಾಡಿದ ನಂತರ ಯಾರಿಗೂ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಮಳಿಗೆ ಬಂದ್ ಮಾಡುವಂತೆ ಪಟ್ಟು ಹಿಡಿದು ಸ್ಥಳದಲ್ಲಿಯೇ ಧರಣಿ ಕುಳಿತರು.

ಈ ಸಂದರ್ಭದಲ್ಲಿ ಅಬಕಾರಿ ಡಿವೈಎಸ್ಪಿ ಶ್ರೀಶೈಲ ಅವಜಿ  ಹಾಗೂ ಎಂಎಸ್ಐಎಲ್ ಜಿಲ್ಲಾ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಕೇಳಿಸಿಕೊಂಡು ಮಾತನಾಡಿದ ಅವರು, ಕಾನೂನು ಬದ್ಧವಾಗಿ ಮದ್ಯ ಮಾರಾಟಕ್ಕೆ ಎಂಎಸ್ಐಎಲ್ ಗೆ ಪರವಾನಗಿ ನೀಡಿದ್ದು, ಜನರ ವಿರೋಧದ ವರದಿಯನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.

ಅಂಗಡಿ ಮಾಲೀಕರು ಇನ್ನು ಒಂದು ತಿಂಗಳ ಒಳಗೆ ರಸ್ತೆಯ ಬದಿಯಲ್ಲಿರುವ ಅಂಗಡಿಯನ್ನು ರಸ್ತೆಯಿಂದ ದೂರದಲ್ಲಿ ಕಟ್ಟಿ ಬದಲಿಸುವ ಭರವಸೆ ನೀಡಿರುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಪ್ರತಿಭಟನೆಕಾರರು ಸ್ಥಳದಲ್ಲಿ ಪೆಂಡಾಲ್ ಹಾಕಿ ಧರಣಿ ಮುಂದುವರೆಸಿದ್ದು, ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಮುಚ್ಚುವವರೆಗೆ ಹೋರಾಟ ಮುಂದುವರೆಸುವುದಾಗಿ ಪಟ್ಟು ಹಿಡಿದು ಧರಣಿ ಮಾಡಿದರು.

ಮತ್ತೊಂದು ತಂಡ ಸ್ಥಳದಲ್ಲಿಯೇ ಎಂಎಸ್ಐಎಲ್ ಮಳಿಗೆಯನ್ನು ಪ್ರಾರಂಭ ಮಾಡಬೇಕು ಎಂದು ಕೆಲವರು ಘೋಷಣೆಗಳನ್ನು ಕೂಗಿದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗ್ರಾಮಾಂತರ ವೃತ್ತ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ಬಿಗಿ ಪೋಲಿಸ್ ವ್ಯವಸ್ಥೆ ಏರ್ಪಡಿಸಲಾಗಿತ್ತು,

ಪ್ರತಿಭಟನೆಯ ನೇತೃತ್ವವನ್ನು ಬೆಗ್ಲಿ ಹೊಸಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚರಣ್, ದಲಿತ ಸಂಘಟನೆಗಳ ಮುಖಂಡರಾದ ಯುವಶಕ್ತಿ ಸುಬ್ಬು, ಮತ್ತಿಕುಂಟೆ ಕೃಷ್ಣ, ಹೂವಳ್ಳಿ ಪ್ರಕಾಶ್ ಎಂ.ಆರ್ ಚೇತನ್ ಬಾಬು ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago