ಕೋಲಾರ: ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಬಳಿ ನೂತನವಾಗಿ ಪ್ರಾರಂಭವಾಗಿರುವ ಎಂಎಸ್ಐಎಲ್ ಮದ್ಯ ಮಾರಾಟದ ಮಳಿಗೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಬುಧವಾರ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮದಿಂದ ಮೆರವಣಿಗೆ ಮೂಲಕ ಹೋಗಿ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಭಾರತೀಯ ದಲಿತ ಸೇನೆ ರಾಜ್ಯ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭ ಮಾಡಿ ಜನತೆಯನ್ನು ಕುಡುಕರನ್ನಾಗಿ ಮಾಡುತ್ತಿದೆಯೆಂದು ದೂರಿದರು.
ಕಳೆದ ಆರು ತಿಂಗಳ ಹಿಂದೆ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಪ್ರಾರಂಭ ಮಾಡಿದಾಗಲೂ ಗಲಾಟೆ ಹಾಗೂ ಪ್ರತಿಭಟನೆ ಮಾಡಿ ಮುಚ್ಚಿಸಿದ್ದು ಮತ್ತೆ ಪ್ರಾರಂಭ ಮಾಡಿರುವುದು ಖಂಡನೀಯ, ಈ ರಸ್ತೆಯಲ್ಲಿ ಕೆಲಸಕ್ಕೆ ಹೋಗುವ ಹೆಣ್ಣುಮಕ್ಕಳು, ಗೃಹಣಿಯರು ಹಾಗೂ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ ಈ ರಸ್ತೆಯಲ್ಲಿ ಮದ್ಯದ ಮಳಿಗೆ ಪ್ರಾರಂಭ ಮಾಡಿದರೆ ತೊಂದರೆ ಆಗುತ್ತದೆಯೆಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಡಿವೈಎಸ್ಪಿ ಶ್ರೀಶೈಲ ಅವಜಿ ಹಾಗೂ ಎಂಎಸ್ಐಎಲ್ ಜಿಲ್ಲಾ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಕೇಳಿಸಿಕೊಂಡು ಮಾತನಾಡಿದ ಅವರು, ಕಾನೂನು ಬದ್ಧವಾಗಿ ಮದ್ಯ ಮಾರಾಟಕ್ಕೆ ಎಂಎಸ್ಐಎಲ್ ಗೆ ಪರವಾನಗಿ ನೀಡಿದ್ದು, ಜನರ ವಿರೋಧದ ವರದಿಯನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.
ಅಂಗಡಿ ಮಾಲೀಕರು ಇನ್ನು ಒಂದು ತಿಂಗಳ ಒಳಗೆ ರಸ್ತೆಯ ಬದಿಯಲ್ಲಿರುವ ಅಂಗಡಿಯನ್ನು ರಸ್ತೆಯಿಂದ ದೂರದಲ್ಲಿ ಕಟ್ಟಿ ಬದಲಿಸುವ ಭರವಸೆ ನೀಡಿರುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಪ್ರತಿಭಟನೆಕಾರರು ಸ್ಥಳದಲ್ಲಿ ಪೆಂಡಾಲ್ ಹಾಕಿ ಧರಣಿ ಮುಂದುವರೆಸಿದ್ದು, ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಮುಚ್ಚುವವರೆಗೆ ಹೋರಾಟ ಮುಂದುವರೆಸುವುದಾಗಿ ಪಟ್ಟು ಹಿಡಿದು ಧರಣಿ ಮಾಡಿದರು.
ಮತ್ತೊಂದು ತಂಡ ಸ್ಥಳದಲ್ಲಿಯೇ ಎಂಎಸ್ಐಎಲ್ ಮಳಿಗೆಯನ್ನು ಪ್ರಾರಂಭ ಮಾಡಬೇಕು ಎಂದು ಕೆಲವರು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ನೇತೃತ್ವವನ್ನು ಬೆಗ್ಲಿ ಹೊಸಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚರಣ್, ದಲಿತ ಸಂಘಟನೆಗಳ ಮುಖಂಡರಾದ ಯುವಶಕ್ತಿ ಸುಬ್ಬು, ಮತ್ತಿಕುಂಟೆ ಕೃಷ್ಣ, ಹೂವಳ್ಳಿ ಪ್ರಕಾಶ್ ಎಂ.ಆರ್ ಚೇತನ್ ಬಾಬು ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…