ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.

ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

10 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

10 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago