ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.

ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

13 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

14 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

20 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago