ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.

ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

2 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

5 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

6 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

14 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

24 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago