ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.

ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

4 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

14 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

19 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

22 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago