ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.

ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.

ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.

ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

2 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

6 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

19 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

22 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

23 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

1 day ago