ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.
ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.
ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.
ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…