ಎಂಟಿಬಿ ನಾಗರಾಜ್ ಅವರಿಗೆ ಲೋಕಸಭಾ ಟಿಕೆಟ್ ನೀಡುವಂತೆ ಒತ್ತಾಯ

ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳಿರುವಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಬಲ ನಾಯಕರು ತಮ್ಮ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಮೂಲಕ ಪರೋಕ್ಷವಾಗಿ ಕಸರತ್ತು ನಡೆಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ನಗರದ  ಜೆ.ಸಿ.ಎನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ‘ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ನೀಡಬೇಕೆಂಬುದು ನಮ್ಮ ಸಮುದಾಯ ಒತ್ತಾಯಿಸುತ್ತದೆ ಎಂದರು.

ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಮಾರು 2ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕೆಲಸಗಳುನ್ನ ಮಾಡಿ ಹೆಚ್ಚು ಜನಮನ್ನಣೆಗಳಿಸಿರುವ ಎಂಟಿಬಿ ನಾಗರಾಜ್ ಅವರಿಗೆ ಈ ಬಾರಿ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಿದರೆ ಬಿಜೆಪಿ ಗೆಲುವು ಬಹುತೇಕ ಖಚಿತವಾಗಲಿದೆ ಎಂದು ತಿಳಿಸಿದರು.

ಬಿಜೆಪಿ ಪಕ್ಷದ ಹಿಂದಿನ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದರೆ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖಂಡರು, ಎಂಟಿಬಿ ನಾಗರಾಜ್ ಅವರು ಸಿದ್ದರಾಮಯ್ಯರ ಆಪ್ತರು ಆದರೂ  ಬಿಜೆಪಿ ಪಕ್ಷಕ್ಕೆ ನಿಷ್ಟವಂತರಾಗಿದ್ದಾರೆ, ಈಗಾಗಲೇ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಕಾಂಗ್ರೆಸ್ ನಿಂದ ಸ್ಪರ್ಧೆಯ ಮಾತಿಲ್ಲವೆಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಕೇಶವ ಮೂರ್ತಿ ಹೊಸಕೋಟೆ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ಆಲಳ್ಳಿ ಚಂದ್ರಶೇಖರ್, ಕನಕ ಕೋ.. ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೋಕೇಶ್, ಗ್ರಾಪಂ‌ ಸದಸ್ಯ ನಾಗರಾಜ್, ಮುಖಂಡರಾದ ಮಂಜುನಾಥ್, ಎಲ್ಲಪ್ಪ, ಚೌಡರಾಜ್, ಕೆಂಪರಾಜು, ಲಕ್ಷ್ಮೀಷ, ಬೀರೇಶ್, ಮುನಿ ಬೀರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

7 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

7 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

10 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

10 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

19 hours ago