ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳಿರುವಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಬಲ ನಾಯಕರು ತಮ್ಮ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಮೂಲಕ ಪರೋಕ್ಷವಾಗಿ ಕಸರತ್ತು ನಡೆಸುತ್ತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ನಗರದ ಜೆ.ಸಿ.ಎನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ‘ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ನೀಡಬೇಕೆಂಬುದು ನಮ್ಮ ಸಮುದಾಯ ಒತ್ತಾಯಿಸುತ್ತದೆ ಎಂದರು.
ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಮಾರು 2ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕೆಲಸಗಳುನ್ನ ಮಾಡಿ ಹೆಚ್ಚು ಜನಮನ್ನಣೆಗಳಿಸಿರುವ ಎಂಟಿಬಿ ನಾಗರಾಜ್ ಅವರಿಗೆ ಈ ಬಾರಿ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಿದರೆ ಬಿಜೆಪಿ ಗೆಲುವು ಬಹುತೇಕ ಖಚಿತವಾಗಲಿದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದ ಹಿಂದಿನ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದರೆ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖಂಡರು, ಎಂಟಿಬಿ ನಾಗರಾಜ್ ಅವರು ಸಿದ್ದರಾಮಯ್ಯರ ಆಪ್ತರು ಆದರೂ ಬಿಜೆಪಿ ಪಕ್ಷಕ್ಕೆ ನಿಷ್ಟವಂತರಾಗಿದ್ದಾರೆ, ಈಗಾಗಲೇ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಕಾಂಗ್ರೆಸ್ ನಿಂದ ಸ್ಪರ್ಧೆಯ ಮಾತಿಲ್ಲವೆಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಕೇಶವ ಮೂರ್ತಿ ಹೊಸಕೋಟೆ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ಆಲಳ್ಳಿ ಚಂದ್ರಶೇಖರ್, ಕನಕ ಕೋ.. ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೋಕೇಶ್, ಗ್ರಾಪಂ ಸದಸ್ಯ ನಾಗರಾಜ್, ಮುಖಂಡರಾದ ಮಂಜುನಾಥ್, ಎಲ್ಲಪ್ಪ, ಚೌಡರಾಜ್, ಕೆಂಪರಾಜು, ಲಕ್ಷ್ಮೀಷ, ಬೀರೇಶ್, ಮುನಿ ಬೀರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…