ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

7 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

14 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago