ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

9 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

9 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

13 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

15 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

18 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

22 hours ago