ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago