ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

9 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

10 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

10 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

11 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

14 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

14 hours ago