ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

29 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago