ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

19 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago