ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago