ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.
ನಮ್ಮ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.
ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…