ಎಂಪಿ ಚುನಾವಣೆ: ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನ- ಕೆಆರ್‌ಎಸ್ ಬೆ.ಗ್ರಾ. ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್

ಕರ್ನಾಟಕ ರಾಷ್ಟ್ರ ಸಮಿತಿ(KRS) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದಲ್ಲಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಪಿ ಚುನಾವಣೆಗೆ ಸ್ಪರ್ಧೆ ಮಾಡ ಬಯಸುವ ಅಭ್ಯರ್ಥಿಗಳ ಸಂದರ್ಶನವು 2024ರ ಜನವರಿ 6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದರು.

ಚುನಾವಣಾ ವಿಚಾರವೂ ಸೇರಿದಂತೆ ಇತರೆ ಹಲವು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಡಿ.32ರಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ 5 ಸಾವಿರ ರೂ. ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10 ಸಾವಿರ ಸಂದರ್ಶನದ ಶುಲ್ಕವಿರುತ್ತದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ 96117 20802 ನಂಬರ್ ಸಂಪರ್ಕಿಸಬಹುದು ಎಂದರು.

ಜಿಲ್ಲಾಧ್ಯಕ್ಷ ಜೆ.ವೆಂಕಟೇಶ್ ಮಾತನಾಡಿ ಕೆಆರ್‌ಎಸ್ ಪಕ್ಷವು ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತಿದೆ. 2023ರ ಮೇನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಿಂದ ಸ್ಪರ್ಧಿಸಿತ್ತು. ಪಕ್ಷವು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ವ್ಯವಸ್ಥೆಯಲ್ಲಿನ ಅಕ್ರಮ, ಅನ್ಯಾಯ, ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಜೊತೆಗೆ ನಾಡಿನ ನೆಲ, ಜಲ, ಭಾಷೆಯ ಸಂರಕ್ಷಣೆಗಾಗಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಾ ಬಂದಿದೆ.

 ಪಕ್ಷವೂ ಉತ್ತಮ ಹಾಗೂ ಜನಪರ ಕಾಳಜಿ ಉಳ್ಳ ಪ್ರಾಮಾಣಿಕ ರಾಜಕಾರಣಕ್ಕೆ ರಾಜ್ಯದಲ್ಲಿರುವ ಏಕೈಕ ವೇದಿಕೆಯಾಗಿದೆ. ರಾಜಕೀಯ ಪಕ್ಷಗಳನ್ನು ಕೇವಲ ಭ್ರಷ್ಟಾಚಾರ, ದುರಾಚಾರ ಹಾಗೂ ಸುಳ್ಳು ಭರವಸೆಗಳಿಂದ ಕೂಡಿರುವುದು ಎಂಬ ಬಲವಾದ ನಂಬಿಕೆ ಬೇರೂರಿರುವ ಕಾಲಘಟ್ಟದಲ್ಲಿ, ನಿರಂತರವಾಗಿ ತನ್ನ ಧ್ಯೇಯ ಮತ್ತು ಸಿದ್ಧಾಂತಗಳಿಗೆ ಬದ್ಧವಾಗಿ, ಅದರಂತೆ ನಡೆಯುತ್ತಿರುವ ಪಕ್ಷ ಕೇವಲ ಕರ್ನಾಟಕ ರಾಜ್ಯ ಸಮಿತಿ ಪಕ್ಷ ಮಾತ್ರ. ದೇಶ ಇಂದು ವಿಚಿತ್ರ ಹಾಗೂ ಸಂಧಿಗ್ಧ ಸಂದರ್ಭದಲ್ಲಿದ್ದು, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣವು ಎಂದಿಗಿಂತ ತೀವ್ರವಾಗಿ ಅಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾಮಾಣಿಕರು, ಕನ್ನಡಪರ ಕಾಳಜಿ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿತಿಸುವವರು, ಅಕ್ರಮ ನಡೆಸದೆ ಚುನಾವಣೆ ಎದುರಿಸುವ, ದೇಣಿಗೆ ಮೂಲಕ ಚುನಾವಣಾ ಖರ್ಚು ವೆಚ್ಚವನ್ನು ಎದುರಿಸುವ ಮನಸ್ಥಿತಿ ಇರುವವರು, ಜನಪರ ಕಾಳಜಿ ಉಳ್ಳವರು, ಪ್ರಾದೇಶಿಕತೆ, ಒಕ್ಕೂಟ ವ್ಯವಸ್ಥೆಯಲ್ಲಿ ಹಾಗು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ನಂಬಿಕೆಯುಳ್ಳವರು ಕೆ ಆರ್ ಎಸ್ ಪಕ್ಷ ಸೇರಿ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಮನವಿ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ, ಹೆಚ್.ಎನ್.ವೇಣು, ಆನಂದ್ ಕುಮಾರ್, ಸಾಸಲು ಹೋಬಳಿಯ ನಾಗರಾಜು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 hour ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

6 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

10 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

24 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

1 day ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago