ಎಂಪಿ ಚುನಾವಣೆ: ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನ- ಕೆಆರ್‌ಎಸ್ ಬೆ.ಗ್ರಾ. ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್

ಕರ್ನಾಟಕ ರಾಷ್ಟ್ರ ಸಮಿತಿ(KRS) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದಲ್ಲಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಪಿ ಚುನಾವಣೆಗೆ ಸ್ಪರ್ಧೆ ಮಾಡ ಬಯಸುವ ಅಭ್ಯರ್ಥಿಗಳ ಸಂದರ್ಶನವು 2024ರ ಜನವರಿ 6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದರು.

ಚುನಾವಣಾ ವಿಚಾರವೂ ಸೇರಿದಂತೆ ಇತರೆ ಹಲವು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಡಿ.32ರಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ 5 ಸಾವಿರ ರೂ. ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10 ಸಾವಿರ ಸಂದರ್ಶನದ ಶುಲ್ಕವಿರುತ್ತದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ 96117 20802 ನಂಬರ್ ಸಂಪರ್ಕಿಸಬಹುದು ಎಂದರು.

ಜಿಲ್ಲಾಧ್ಯಕ್ಷ ಜೆ.ವೆಂಕಟೇಶ್ ಮಾತನಾಡಿ ಕೆಆರ್‌ಎಸ್ ಪಕ್ಷವು ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತಿದೆ. 2023ರ ಮೇನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಿಂದ ಸ್ಪರ್ಧಿಸಿತ್ತು. ಪಕ್ಷವು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ವ್ಯವಸ್ಥೆಯಲ್ಲಿನ ಅಕ್ರಮ, ಅನ್ಯಾಯ, ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಜೊತೆಗೆ ನಾಡಿನ ನೆಲ, ಜಲ, ಭಾಷೆಯ ಸಂರಕ್ಷಣೆಗಾಗಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಾ ಬಂದಿದೆ.

 ಪಕ್ಷವೂ ಉತ್ತಮ ಹಾಗೂ ಜನಪರ ಕಾಳಜಿ ಉಳ್ಳ ಪ್ರಾಮಾಣಿಕ ರಾಜಕಾರಣಕ್ಕೆ ರಾಜ್ಯದಲ್ಲಿರುವ ಏಕೈಕ ವೇದಿಕೆಯಾಗಿದೆ. ರಾಜಕೀಯ ಪಕ್ಷಗಳನ್ನು ಕೇವಲ ಭ್ರಷ್ಟಾಚಾರ, ದುರಾಚಾರ ಹಾಗೂ ಸುಳ್ಳು ಭರವಸೆಗಳಿಂದ ಕೂಡಿರುವುದು ಎಂಬ ಬಲವಾದ ನಂಬಿಕೆ ಬೇರೂರಿರುವ ಕಾಲಘಟ್ಟದಲ್ಲಿ, ನಿರಂತರವಾಗಿ ತನ್ನ ಧ್ಯೇಯ ಮತ್ತು ಸಿದ್ಧಾಂತಗಳಿಗೆ ಬದ್ಧವಾಗಿ, ಅದರಂತೆ ನಡೆಯುತ್ತಿರುವ ಪಕ್ಷ ಕೇವಲ ಕರ್ನಾಟಕ ರಾಜ್ಯ ಸಮಿತಿ ಪಕ್ಷ ಮಾತ್ರ. ದೇಶ ಇಂದು ವಿಚಿತ್ರ ಹಾಗೂ ಸಂಧಿಗ್ಧ ಸಂದರ್ಭದಲ್ಲಿದ್ದು, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣವು ಎಂದಿಗಿಂತ ತೀವ್ರವಾಗಿ ಅಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾಮಾಣಿಕರು, ಕನ್ನಡಪರ ಕಾಳಜಿ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿತಿಸುವವರು, ಅಕ್ರಮ ನಡೆಸದೆ ಚುನಾವಣೆ ಎದುರಿಸುವ, ದೇಣಿಗೆ ಮೂಲಕ ಚುನಾವಣಾ ಖರ್ಚು ವೆಚ್ಚವನ್ನು ಎದುರಿಸುವ ಮನಸ್ಥಿತಿ ಇರುವವರು, ಜನಪರ ಕಾಳಜಿ ಉಳ್ಳವರು, ಪ್ರಾದೇಶಿಕತೆ, ಒಕ್ಕೂಟ ವ್ಯವಸ್ಥೆಯಲ್ಲಿ ಹಾಗು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ನಂಬಿಕೆಯುಳ್ಳವರು ಕೆ ಆರ್ ಎಸ್ ಪಕ್ಷ ಸೇರಿ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಮನವಿ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ, ಹೆಚ್.ಎನ್.ವೇಣು, ಆನಂದ್ ಕುಮಾರ್, ಸಾಸಲು ಹೋಬಳಿಯ ನಾಗರಾಜು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago