ಎಂಪಿ ಚುನಾವಣೆ: ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನ- ಕೆಆರ್‌ಎಸ್ ಬೆ.ಗ್ರಾ. ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್

ಕರ್ನಾಟಕ ರಾಷ್ಟ್ರ ಸಮಿತಿ(KRS) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದಲ್ಲಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಪಿ ಚುನಾವಣೆಗೆ ಸ್ಪರ್ಧೆ ಮಾಡ ಬಯಸುವ ಅಭ್ಯರ್ಥಿಗಳ ಸಂದರ್ಶನವು 2024ರ ಜನವರಿ 6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದರು.

ಚುನಾವಣಾ ವಿಚಾರವೂ ಸೇರಿದಂತೆ ಇತರೆ ಹಲವು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಡಿ.32ರಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ 5 ಸಾವಿರ ರೂ. ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10 ಸಾವಿರ ಸಂದರ್ಶನದ ಶುಲ್ಕವಿರುತ್ತದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ 96117 20802 ನಂಬರ್ ಸಂಪರ್ಕಿಸಬಹುದು ಎಂದರು.

ಜಿಲ್ಲಾಧ್ಯಕ್ಷ ಜೆ.ವೆಂಕಟೇಶ್ ಮಾತನಾಡಿ ಕೆಆರ್‌ಎಸ್ ಪಕ್ಷವು ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತಿದೆ. 2023ರ ಮೇನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಿಂದ ಸ್ಪರ್ಧಿಸಿತ್ತು. ಪಕ್ಷವು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ವ್ಯವಸ್ಥೆಯಲ್ಲಿನ ಅಕ್ರಮ, ಅನ್ಯಾಯ, ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಜೊತೆಗೆ ನಾಡಿನ ನೆಲ, ಜಲ, ಭಾಷೆಯ ಸಂರಕ್ಷಣೆಗಾಗಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಾ ಬಂದಿದೆ.

 ಪಕ್ಷವೂ ಉತ್ತಮ ಹಾಗೂ ಜನಪರ ಕಾಳಜಿ ಉಳ್ಳ ಪ್ರಾಮಾಣಿಕ ರಾಜಕಾರಣಕ್ಕೆ ರಾಜ್ಯದಲ್ಲಿರುವ ಏಕೈಕ ವೇದಿಕೆಯಾಗಿದೆ. ರಾಜಕೀಯ ಪಕ್ಷಗಳನ್ನು ಕೇವಲ ಭ್ರಷ್ಟಾಚಾರ, ದುರಾಚಾರ ಹಾಗೂ ಸುಳ್ಳು ಭರವಸೆಗಳಿಂದ ಕೂಡಿರುವುದು ಎಂಬ ಬಲವಾದ ನಂಬಿಕೆ ಬೇರೂರಿರುವ ಕಾಲಘಟ್ಟದಲ್ಲಿ, ನಿರಂತರವಾಗಿ ತನ್ನ ಧ್ಯೇಯ ಮತ್ತು ಸಿದ್ಧಾಂತಗಳಿಗೆ ಬದ್ಧವಾಗಿ, ಅದರಂತೆ ನಡೆಯುತ್ತಿರುವ ಪಕ್ಷ ಕೇವಲ ಕರ್ನಾಟಕ ರಾಜ್ಯ ಸಮಿತಿ ಪಕ್ಷ ಮಾತ್ರ. ದೇಶ ಇಂದು ವಿಚಿತ್ರ ಹಾಗೂ ಸಂಧಿಗ್ಧ ಸಂದರ್ಭದಲ್ಲಿದ್ದು, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣವು ಎಂದಿಗಿಂತ ತೀವ್ರವಾಗಿ ಅಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾಮಾಣಿಕರು, ಕನ್ನಡಪರ ಕಾಳಜಿ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿತಿಸುವವರು, ಅಕ್ರಮ ನಡೆಸದೆ ಚುನಾವಣೆ ಎದುರಿಸುವ, ದೇಣಿಗೆ ಮೂಲಕ ಚುನಾವಣಾ ಖರ್ಚು ವೆಚ್ಚವನ್ನು ಎದುರಿಸುವ ಮನಸ್ಥಿತಿ ಇರುವವರು, ಜನಪರ ಕಾಳಜಿ ಉಳ್ಳವರು, ಪ್ರಾದೇಶಿಕತೆ, ಒಕ್ಕೂಟ ವ್ಯವಸ್ಥೆಯಲ್ಲಿ ಹಾಗು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ನಂಬಿಕೆಯುಳ್ಳವರು ಕೆ ಆರ್ ಎಸ್ ಪಕ್ಷ ಸೇರಿ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಮನವಿ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ, ಹೆಚ್.ಎನ್.ವೇಣು, ಆನಂದ್ ಕುಮಾರ್, ಸಾಸಲು ಹೋಬಳಿಯ ನಾಗರಾಜು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago