ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ತೆಗೆದುಹಾಕಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಇತ್ತೀಚೆಗೆ ಇದಕ್ಕೆ ಎರಡು ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಶಾಸಕ ಟಿ.ವೆಂಕಟರಮಣಯ್ಯ ತಾಲೂಕಿಗೆ, ಪಕ್ಷಕ್ಕೆ ಎಂ.ಜಿ.ಶ್ರೀನಿವಾಸ್ ರವರ ಕೊಡುಗೆ ಏನು ? ಶೀಘ್ರವಾಗಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದಾಗಿ ಹೇಳಿದ್ದರು. ಅದರಂತೆ ಇಂದು ಉಚ್ಚಾಟನೆ ಮಾಡಲಾಗಿದೆ.
ಇವೆಲ್ಲಾ ಬೆಳವಣಿಗೆ ನಡುವೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಾಲಿ ಶಾಸಕ ಟಿ.ವೆಂಕಟರಮಣಯ್ಯನವರಿಗೆ ಘೋಷಣೆಯಾಗಿದ್ದು, ತನ್ನ ವಿರೋಧಿ ಬಣದಲ್ಲಿ ಕಾಣಿಸಿಕೊಂಡಿದ್ದ ಎಂ.ಜಿ ಶ್ರೀನಿವಾಸ್ ರನ್ನು ಪಕ್ಷದಿಂದ ಹೊರಹಾಕಿ ಶಾಸಕ ಟಿ.ವೆಂಕಟರಮಣಯ್ಯ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಮೊದಲ ಸರದಿಯಲ್ಲಿ ಎಂ.ಜಿ.ಶ್ರೀನಿವಾಸ್ ರವರಿಗೆ ಗೇಟ್ ಪಾಸ್ ನೀಡಲಾಗಿದ್ದು, ಮುಂದೆ ಕಾಂಗ್ರೆಸ್ ಸ್ವಾಭಿಮಾನ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಿ.ಸಿ.ಆನಂದ್ ಕುಮಾರ್ ಹಾಗೂ ತಿ. ರಂಗರಾಜು ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.?
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…