ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ತೆಗೆದುಹಾಕಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಇತ್ತೀಚೆಗೆ ಇದಕ್ಕೆ ಎರಡು ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಶಾಸಕ ಟಿ.ವೆಂಕಟರಮಣಯ್ಯ ತಾಲೂಕಿಗೆ, ಪಕ್ಷಕ್ಕೆ ಎಂ.ಜಿ.ಶ್ರೀನಿವಾಸ್ ರವರ ಕೊಡುಗೆ ಏನು ? ಶೀಘ್ರವಾಗಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದಾಗಿ ಹೇಳಿದ್ದರು. ಅದರಂತೆ ಇಂದು ಉಚ್ಚಾಟನೆ ಮಾಡಲಾಗಿದೆ.
ಇವೆಲ್ಲಾ ಬೆಳವಣಿಗೆ ನಡುವೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಾಲಿ ಶಾಸಕ ಟಿ.ವೆಂಕಟರಮಣಯ್ಯನವರಿಗೆ ಘೋಷಣೆಯಾಗಿದ್ದು, ತನ್ನ ವಿರೋಧಿ ಬಣದಲ್ಲಿ ಕಾಣಿಸಿಕೊಂಡಿದ್ದ ಎಂ.ಜಿ ಶ್ರೀನಿವಾಸ್ ರನ್ನು ಪಕ್ಷದಿಂದ ಹೊರಹಾಕಿ ಶಾಸಕ ಟಿ.ವೆಂಕಟರಮಣಯ್ಯ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಮೊದಲ ಸರದಿಯಲ್ಲಿ ಎಂ.ಜಿ.ಶ್ರೀನಿವಾಸ್ ರವರಿಗೆ ಗೇಟ್ ಪಾಸ್ ನೀಡಲಾಗಿದ್ದು, ಮುಂದೆ ಕಾಂಗ್ರೆಸ್ ಸ್ವಾಭಿಮಾನ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಿ.ಸಿ.ಆನಂದ್ ಕುಮಾರ್ ಹಾಗೂ ತಿ. ರಂಗರಾಜು ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.?
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…