ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ತೆಗೆದುಹಾಕಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಇತ್ತೀಚೆಗೆ ಇದಕ್ಕೆ ಎರಡು ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಶಾಸಕ ಟಿ.ವೆಂಕಟರಮಣಯ್ಯ ತಾಲೂಕಿಗೆ, ಪಕ್ಷಕ್ಕೆ ಎಂ.ಜಿ.ಶ್ರೀನಿವಾಸ್ ರವರ ಕೊಡುಗೆ ಏನು ? ಶೀಘ್ರವಾಗಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದಾಗಿ ಹೇಳಿದ್ದರು. ಅದರಂತೆ ಇಂದು ಉಚ್ಚಾಟನೆ ಮಾಡಲಾಗಿದೆ.
ಇವೆಲ್ಲಾ ಬೆಳವಣಿಗೆ ನಡುವೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಾಲಿ ಶಾಸಕ ಟಿ.ವೆಂಕಟರಮಣಯ್ಯನವರಿಗೆ ಘೋಷಣೆಯಾಗಿದ್ದು, ತನ್ನ ವಿರೋಧಿ ಬಣದಲ್ಲಿ ಕಾಣಿಸಿಕೊಂಡಿದ್ದ ಎಂ.ಜಿ ಶ್ರೀನಿವಾಸ್ ರನ್ನು ಪಕ್ಷದಿಂದ ಹೊರಹಾಕಿ ಶಾಸಕ ಟಿ.ವೆಂಕಟರಮಣಯ್ಯ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಮೊದಲ ಸರದಿಯಲ್ಲಿ ಎಂ.ಜಿ.ಶ್ರೀನಿವಾಸ್ ರವರಿಗೆ ಗೇಟ್ ಪಾಸ್ ನೀಡಲಾಗಿದ್ದು, ಮುಂದೆ ಕಾಂಗ್ರೆಸ್ ಸ್ವಾಭಿಮಾನ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಿ.ಸಿ.ಆನಂದ್ ಕುಮಾರ್ ಹಾಗೂ ತಿ. ರಂಗರಾಜು ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.?
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…