ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 03‌ ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು.

ಆದರೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.8 ಲಕ್ಷಗಳನ್ನು ಮೀರಬಾರದು. ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು.

ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು. ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿದಾರರಿಗೆ ಸೂಚನೆಗಳು

ಅರ್ಜಿದಾರರು https://sevasindhu.Karnataka.gov.in/Sevasindhu/Department Service ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ  ಎಂ.ಫಿಲ್ ಅಥವಾ ಪಿ.ಹೆಚ್.ಡಿ ಗಳಲ್ಲಿ ಯಾವುದಾದರೂ ಒಂದು ಕೋರ್ಸ್ ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQs) ಇಲ್ಲಿ ಲಭ್ಯವಿದೆ. https://Dom.Karnataka.gov.in ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

ಕಚೇರಿ ದೂರವಾಣಿ ಸಂಖ್ಯೆ

1.ಜಿಲ್ಲಾ ಕಚೇರಿ, ದೇವನಹಳ್ಳಿ 080- 29787455,

2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,

3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516,

4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851,

5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779,

6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

38 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

50 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago