ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 03‌ ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು.

ಆದರೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.8 ಲಕ್ಷಗಳನ್ನು ಮೀರಬಾರದು. ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು.

ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು. ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿದಾರರಿಗೆ ಸೂಚನೆಗಳು

ಅರ್ಜಿದಾರರು https://sevasindhu.Karnataka.gov.in/Sevasindhu/Department Service ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ  ಎಂ.ಫಿಲ್ ಅಥವಾ ಪಿ.ಹೆಚ್.ಡಿ ಗಳಲ್ಲಿ ಯಾವುದಾದರೂ ಒಂದು ಕೋರ್ಸ್ ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQs) ಇಲ್ಲಿ ಲಭ್ಯವಿದೆ. https://Dom.Karnataka.gov.in ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

ಕಚೇರಿ ದೂರವಾಣಿ ಸಂಖ್ಯೆ

1.ಜಿಲ್ಲಾ ಕಚೇರಿ, ದೇವನಹಳ್ಳಿ 080- 29787455,

2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,

3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516,

4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851,

5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779,

6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

46 minutes ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago