ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ಕೊಲೆಯ ಹಿಂದಿರುವ ಸಂಚುಕೋರರನ್ನು ಪತ್ತೆ ಹಚ್ಚಲು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಮುಖಂಡರು ಆಗಿದ್ದ ಎಂ.ಶ್ರೀನಿವಾಸನ್ ಕೊಲೆಯ ವಿಚಾರವಾಗಿ ಹಲವಾರು ಸಂಘಟನೆಗಳು ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಪ್ರತಿಭಟನೆಗೆ ಮಣಿದು ಪ್ರಕರಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಿಓಡಿ ತನಿಖೆಗೆ ಒಪ್ಪಿಸಲಾಗಿತ್ತು ಎಂದು ವಿವರಿಸಿದರು.
ಪ್ರಕರಣವನ್ನು ಸಿ.ಓ.ಡಿ.ಗೆ ಒಪ್ಪಿಸಿ ಎರಡು ತಿಂಗಳು ಆಗಿದ್ದರು ಯಾವುದೇ ಪ್ರಗತಿ ಕಾಣದೆ ಇರುವುದರಿಂದ ಹಾಗೂ ಸಿ.ಓ.ಡಿ.ಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡದಿರುವುದರಿಂದ ಮತ್ತು ಕೊಲೆಯ ಹಿಂದಿರುವ ಸೂತ್ರದಾರರನ್ನು ಪತ್ತೆ ಮಾಡುವಲ್ಲಿ ತನಿಖೆ ನಡೆಸುತ್ತಿರುವ ಸಿ.ಓ.ಡಿ ವಿಫಲವಾಗಿದೆ. ಇದರಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇಲ್ಲವಾಗಿದೆ ಎಂದರು.
ಶ್ರೀನಿವಾಸಪುರದ ಎಂ.ಶ್ರೀನಿವಾಸನ್ ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಇತ್ತೀಚಿಗೆ ತನಿಖೆ ವಹಿಸಿಕೊಂಡಿರುವ ಸಿ.ಓ.ಡಿ ಯಿಂದ ಸಾಧ್ಯವಾಗಲಿಲ್ಲ. ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಫಲವಾಗಿರುವುದರಿಂದ ಈ ತನಿಖೆಯನ್ನು ಸಿ.ಬಿ.ಐ.ಗೆ ವಹಿಸುವುದೊಂದೇ ಏಕೈಕ ಮಾರ್ಗವೆಂದು ಅವರ ಕುಟುಂಬಸ್ಥರ ಜೊತೆ ಕೈಜೋಡಿಸಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 11:30 ಗಂಟೆಗೆ ದಲಿತ ಮತ್ತು ಹಿಂದುಳಿದ, ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಮಠಾಧೀಶ ಸಾರಥ್ಯದಲ್ಲಿ ಜನಪರ ಸಂಘಟನೆಗಳೊಂದಿಗೆ ಸರ್ಕಾರದ ಮೇಲೆ ಒತ್ತಡ ತರಲು ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್, ಬಿಸಿಯೂಟ ಮತ್ತು ಅಕ್ಷರ ದಾಸೋಹ ಸಂಘದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ಮಂಜಲಿ ಶಿವಣ್ಣ, ಸಮತ ಸೈನಿಕ ದಳ ಅಂಬರೀಶ್, ಮುಖಂಡ ಬದರಿ ನಾರಾಯಣ್, ಜಿಲ್ಲಾಧ್ಯಕ್ಷ ಗುಟ್ಟಹಳ್ಳಿ ಶ್ರೀನಿವಾಸ್, ಮೃತ ಶ್ರೀನಿವಾಸ್ ರವರ ಅಳಿಯ ಹಾಗೂ ಪುರಸಭಾ ಸದಸ್ಯ ಭಾಸ್ಕರ್ ಮುಂತಾದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…