ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ಕೊಲೆಯ ಹಿಂದಿರುವ ಸಂಚುಕೋರರನ್ನು ಪತ್ತೆ ಹಚ್ಚಲು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಮುಖಂಡರು ಆಗಿದ್ದ ಎಂ.ಶ್ರೀನಿವಾಸನ್ ಕೊಲೆಯ ವಿಚಾರವಾಗಿ ಹಲವಾರು ಸಂಘಟನೆಗಳು ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಪ್ರತಿಭಟನೆಗೆ ಮಣಿದು ಪ್ರಕರಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಿಓಡಿ ತನಿಖೆಗೆ ಒಪ್ಪಿಸಲಾಗಿತ್ತು ಎಂದು ವಿವರಿಸಿದರು.
ಪ್ರಕರಣವನ್ನು ಸಿ.ಓ.ಡಿ.ಗೆ ಒಪ್ಪಿಸಿ ಎರಡು ತಿಂಗಳು ಆಗಿದ್ದರು ಯಾವುದೇ ಪ್ರಗತಿ ಕಾಣದೆ ಇರುವುದರಿಂದ ಹಾಗೂ ಸಿ.ಓ.ಡಿ.ಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡದಿರುವುದರಿಂದ ಮತ್ತು ಕೊಲೆಯ ಹಿಂದಿರುವ ಸೂತ್ರದಾರರನ್ನು ಪತ್ತೆ ಮಾಡುವಲ್ಲಿ ತನಿಖೆ ನಡೆಸುತ್ತಿರುವ ಸಿ.ಓ.ಡಿ ವಿಫಲವಾಗಿದೆ. ಇದರಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇಲ್ಲವಾಗಿದೆ ಎಂದರು.
ಶ್ರೀನಿವಾಸಪುರದ ಎಂ.ಶ್ರೀನಿವಾಸನ್ ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಇತ್ತೀಚಿಗೆ ತನಿಖೆ ವಹಿಸಿಕೊಂಡಿರುವ ಸಿ.ಓ.ಡಿ ಯಿಂದ ಸಾಧ್ಯವಾಗಲಿಲ್ಲ. ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಫಲವಾಗಿರುವುದರಿಂದ ಈ ತನಿಖೆಯನ್ನು ಸಿ.ಬಿ.ಐ.ಗೆ ವಹಿಸುವುದೊಂದೇ ಏಕೈಕ ಮಾರ್ಗವೆಂದು ಅವರ ಕುಟುಂಬಸ್ಥರ ಜೊತೆ ಕೈಜೋಡಿಸಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 11:30 ಗಂಟೆಗೆ ದಲಿತ ಮತ್ತು ಹಿಂದುಳಿದ, ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಮಠಾಧೀಶ ಸಾರಥ್ಯದಲ್ಲಿ ಜನಪರ ಸಂಘಟನೆಗಳೊಂದಿಗೆ ಸರ್ಕಾರದ ಮೇಲೆ ಒತ್ತಡ ತರಲು ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್, ಬಿಸಿಯೂಟ ಮತ್ತು ಅಕ್ಷರ ದಾಸೋಹ ಸಂಘದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ಮಂಜಲಿ ಶಿವಣ್ಣ, ಸಮತ ಸೈನಿಕ ದಳ ಅಂಬರೀಶ್, ಮುಖಂಡ ಬದರಿ ನಾರಾಯಣ್, ಜಿಲ್ಲಾಧ್ಯಕ್ಷ ಗುಟ್ಟಹಳ್ಳಿ ಶ್ರೀನಿವಾಸ್, ಮೃತ ಶ್ರೀನಿವಾಸ್ ರವರ ಅಳಿಯ ಹಾಗೂ ಪುರಸಭಾ ಸದಸ್ಯ ಭಾಸ್ಕರ್ ಮುಂತಾದವರು ಉಪಸ್ಥಿತರಿದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…