ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ಕೊಲೆಯ ಹಿಂದಿರುವ ಸಂಚುಕೋರರನ್ನು ಪತ್ತೆ ಹಚ್ಚಲು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ತಿಳಿಸಿದರು
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಮುಖಂಡರು ಆಗಿದ್ದ ಎಂ.ಶ್ರೀನಿವಾಸನ್ ಕೊಲೆಯ ವಿಚಾರವಾಗಿ ಹಲವಾರು ಸಂಘಟನೆಗಳು ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಪ್ರತಿಭಟನೆಗೆ ಮಣಿದು ಪ್ರಕರಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಿಓಡಿ ತನಿಖೆಗೆ ಒಪ್ಪಿಸಲಾಗಿತ್ತು ಎಂದು ವಿವರಿಸಿದರು.
ಪ್ರಕರಣವನ್ನು ಸಿ.ಓ.ಡಿ.ಗೆ ಒಪ್ಪಿಸಿ ಎರಡು ತಿಂಗಳು ಆಗಿದ್ದರು ಯಾವುದೇ ಪ್ರಗತಿ ಕಾಣದೆ ಇರುವುದರಿಂದ ಹಾಗೂ ಸಿ.ಓ.ಡಿ.ಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡದಿರುವುದರಿಂದ ಮತ್ತು ಕೊಲೆಯ ಹಿಂದಿರುವ ಸೂತ್ರದಾರರನ್ನು ಪತ್ತೆ ಮಾಡುವಲ್ಲಿ ತನಿಖೆ ನಡೆಸುತ್ತಿರುವ ಸಿ.ಓ.ಡಿ ವಿಫಲವಾಗಿದೆ. ಇದರಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇಲ್ಲವಾಗಿದೆ ಎಂದರು.
ಶ್ರೀನಿವಾಸಪುರದ ಎಂ.ಶ್ರೀನಿವಾಸನ್ ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಇತ್ತೀಚಿಗೆ ತನಿಖೆ ವಹಿಸಿಕೊಂಡಿರುವ ಸಿ.ಓ.ಡಿ ಯಿಂದ ಸಾಧ್ಯವಾಗಲಿಲ್ಲ. ಕೊಲೆಯ ಹಿಂದಿರುವ ನಿಜವಾದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಫಲವಾಗಿರುವುದರಿಂದ ಈ ತನಿಖೆಯನ್ನು ಸಿ.ಬಿ.ಐ.ಗೆ ವಹಿಸುವುದೊಂದೇ ಏಕೈಕ ಮಾರ್ಗವೆಂದು ಅವರ ಕುಟುಂಬಸ್ಥರ ಜೊತೆ ಕೈಜೋಡಿಸಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 11:30 ಗಂಟೆಗೆ ದಲಿತ ಮತ್ತು ಹಿಂದುಳಿದ, ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಮಠಾಧೀಶ ಸಾರಥ್ಯದಲ್ಲಿ ಜನಪರ ಸಂಘಟನೆಗಳೊಂದಿಗೆ ಸರ್ಕಾರದ ಮೇಲೆ ಒತ್ತಡ ತರಲು ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್, ಬಿಸಿಯೂಟ ಮತ್ತು ಅಕ್ಷರ ದಾಸೋಹ ಸಂಘದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ಮಂಜಲಿ ಶಿವಣ್ಣ, ಸಮತ ಸೈನಿಕ ದಳ ಅಂಬರೀಶ್, ಮುಖಂಡ ಬದರಿ ನಾರಾಯಣ್, ಜಿಲ್ಲಾಧ್ಯಕ್ಷ ಗುಟ್ಟಹಳ್ಳಿ ಶ್ರೀನಿವಾಸ್, ಮೃತ ಶ್ರೀನಿವಾಸ್ ರವರ ಅಳಿಯ ಹಾಗೂ ಪುರಸಭಾ ಸದಸ್ಯ ಭಾಸ್ಕರ್ ಮುಂತಾದವರು ಉಪಸ್ಥಿತರಿದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…