Categories: ಸಿನಿಮಾ

“ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಕೋರಿದ ಅಭಿಮಾನಿಗಳು: ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ “ಎಕ್ಕ”: ಒಂದೇ ದಿನ ಆದ ಕಲೆಕ್ಷನ್ ಎಷ್ಟು ಗೊತ್ತಾ…?

ಯುವ ರಾಜ್​ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.

Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.

ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.

ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.

Ramesh Babu

Journalist

Share
Published by
Ramesh Babu

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago