Categories: ಸಿನಿಮಾ

“ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಕೋರಿದ ಅಭಿಮಾನಿಗಳು: ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ “ಎಕ್ಕ”: ಒಂದೇ ದಿನ ಆದ ಕಲೆಕ್ಷನ್ ಎಷ್ಟು ಗೊತ್ತಾ…?

ಯುವ ರಾಜ್​ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.

Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.

ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.

ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.

Ramesh Babu

Journalist

Share
Published by
Ramesh Babu

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

35 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

1 hour ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago