Categories: ಸಿನಿಮಾ

“ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಕೋರಿದ ಅಭಿಮಾನಿಗಳು: ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ “ಎಕ್ಕ”: ಒಂದೇ ದಿನ ಆದ ಕಲೆಕ್ಷನ್ ಎಷ್ಟು ಗೊತ್ತಾ…?

ಯುವ ರಾಜ್​ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.

Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.

ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.

ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.

Ramesh Babu

Journalist

Share
Published by
Ramesh Babu

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago