Categories: ಸಿನಿಮಾ

“ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಕೋರಿದ ಅಭಿಮಾನಿಗಳು: ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ “ಎಕ್ಕ”: ಒಂದೇ ದಿನ ಆದ ಕಲೆಕ್ಷನ್ ಎಷ್ಟು ಗೊತ್ತಾ…?

ಯುವ ರಾಜ್​ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.

Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.

ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.

ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.

Ramesh Babu

Journalist

Share
Published by
Ramesh Babu

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

24 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

46 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago