Categories: ಸಿನಿಮಾ

“ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಕೋರಿದ ಅಭಿಮಾನಿಗಳು: ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ “ಎಕ್ಕ”: ಒಂದೇ ದಿನ ಆದ ಕಲೆಕ್ಷನ್ ಎಷ್ಟು ಗೊತ್ತಾ…?

ಯುವ ರಾಜ್​ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.

Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.

ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.

ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.

Ramesh Babu

Journalist

Share
Published by
Ramesh Babu

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

2 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

16 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

16 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

16 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago