Categories: ಕೋಲಾರ

ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ: ಇದಕ್ಕೆ ಸಹಕರಿಸಿದವರಿಗೆ ಧನ್ಯವಾದಗಳನ್ನ ತಿಳಿಸಿದ ಸಿಐಟಿಯು

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು. ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

6 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

19 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

21 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

2 days ago