Categories: ಕೋಲಾರ

ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ: ಇದಕ್ಕೆ ಸಹಕರಿಸಿದವರಿಗೆ ಧನ್ಯವಾದಗಳನ್ನ ತಿಳಿಸಿದ ಸಿಐಟಿಯು

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು. ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago