Categories: ಕೋಲಾರ

ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ: ಇದಕ್ಕೆ ಸಹಕರಿಸಿದವರಿಗೆ ಧನ್ಯವಾದಗಳನ್ನ ತಿಳಿಸಿದ ಸಿಐಟಿಯು

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು. ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago