Categories: ಕೋಲಾರ

ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ: ಏ.29 ರಿಂದ ಉಪವಾಸಕ್ಕೆ ನಿರ್ಧಾರ

ಕೋಲಾರ: ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಸಿಡಿ ಕ್ಲಚ್ ಕಾರ್ಖಾನೆಯ ಕಾರ್ಮಿಕರು ಮತ್ತು ಮಾಲೀಕರ ಮಧ್ಯೆ ಶನಿವಾರ ನಡೆದ ಮಾತುಕತೆ ವಿಫಲವಾಗಿದ್ದು ಏ.29 ರಿಂದ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮತ್ತು ಕಾರ್ಮಿಕ ಮುಖಂಡರು ಸೇರಿದಂತೆ ಕಂಪನಿಯ ಕಾರ್ಮಿಕರೊಂದಿಗೆ ಉಪವಾಸ ಸತ್ಯಾಗ್ರಹಕ್ಕೆ ಕೈಜೋಡಿಸಲಿದ್ದಾರೆ.

ಎಕ್ಷಿಡಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧ್ಯೆ ಸುಮಾರು 33 ದಿನಗಳಿಂದ ನಡೆಸುತ್ತಿರುವ ಧರಣಿಗೆ ಇದುವರೆಗೆ ಯಾವುದೇ ಸ್ವಂದನೆ ಸಿಕ್ಕಿಲ್ಲ, ಜಿಲ್ಲಾಡಳಿತವು ಈಗಾಗಲೇ ಮಧ್ಯೆ ಪ್ರವೇಶ ಮಾಡಬೇಕಾಗಿತ್ತು, ಆದರೆ, ಜಿಲ್ಲಾಡಳಿತ ನಿರ್ಲಕ್ಷ್ಯದಿಂದ ದಿನನಿತ್ಯ ಕಂಪನಿಯ ಮುಂದೆ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ನಡೆಸಿದರೂ ಯಾವುದೇ ಕ್ರಮವಹಿಸಿಲ್ಲ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಎಕ್ಸಿಡಿ ಕ್ಲಚ್ ಕಾರ್ಮಿಕರು ಮತ್ತು ಕಾರ್ಖಾನೆಯ ಆಡಳಿತ ಮಂಡಳಿಯು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿತ್ತು ಆದರೆ ಜಾರಿ ಮಾಡಲು ಕಂಪನಿಯ ಆಡಳಿತ ಮಂಡಳಿ ಮುಂದಾಗಿಲ್ಲ. ತನ್ನ ಮೊಂಡುತನವನ್ನು ಪ್ರದರ್ಶಿಸುತ್ತಾ ಬಂದಿದ್ದು, ಖಂಡನೀಯವಾಗಿದೆ ಕಾರ್ಮಿಕರ ಬೇಡಿಕೆಗಳನ್ನು ನ್ಯಾಯುಯುತವಾಗಿದ್ದು, ಸ್ಥಳೀಯ ಕಾರ್ಮಿಕರಿಗೆ ನ್ಯಾಯ ಸಿಗಬೇಕಾಗಿದೆ. ಸರಕಾರ, ಜಿಲ್ಲಾಡಳಿತ ಮತ್ತು ಕಂಪನಿಯ ಆಡಳಿತ ಮಂಡಳಿಯ ಕಾರ್ಮಿಕರನ್ನು ಪರಿಗಣಿಸಿ ಅವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ಸುಮಾರು 15 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿ. ಆದರೆ, ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ದ ಕೇಸ್ ಗಳನ್ನು ಹಾಕಿ ಕಂಪನಿಯಿಂದ ಹೊರಹಾಕಿದ್ದಾರೆ. ಕಾರ್ಮಿಕರ ಪರವಾಗಿ ಸಿಐಟಿಯು ಸೇರಿದಂತೆ ಕಾರ್ಮಿಕ ಸಂಘಟನೆಗಳು ಬೆಂಬಲವಾಗಿ ನಿಲ್ಲಲಿದ್ದು, ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕ ಬೇಡಿಕೆಗಳನ್ನು ಈಡೇರಿಸುವ ತನಕ ಕಾರ್ಮಿಕರೊಂದಿಗೆ ಉಪವಾಸ ಮಾಡಲು ಸಿದ್ದನಿದ್ದೇನೆ ಎಂದರು

ಜಿಲ್ಲೆಯಲ್ಲಿ ನೂರಾರು ಕೈಗಾರಿಕೆಗಳು ಸ್ಥಾಪನೆ ಯಾಗುತ್ತಿರುವುದು ಸ್ವಾಗತಾರ್ಹವಾದರೂ, ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಮೊದಲ ಆದ್ಯತೆ ಕೆಲವಾಗಬೇಕು. ಪ್ರತಿ ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಲು ಯೂನಿಯನ್ ಸ್ಥಾಪಿಸಬೇಕು. ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳು ಬೆಂಬಲಿಸಬೇಕು. ಈ ಹೋರಾಟ ಉಗ್ರ ಸ್ವರೂಪಕ್ಕೆ ಹೋಗುವ ಮುನ್ನ ಎಚ್ಚತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕೆ.ಪಿ.ಆರ್.ಆರ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಪ್ರಮೋದ್, ಖಜಾಂಚಿ ಮಂಜುನಾಥ್, ಸಿಐಟಿಯು ಮುಖಂಡರಾದ ಭೀಮರಾಜ್, ಶಿವಾನಂದ್, ಭದ್ರೀನಾಥ್, ಮುಂತಾದವರು ಇದ್ದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago