Categories: ಲೇಖನ

ಎಚ್ಚರಿಕೆಯ ಫಲಕಗಳು…..ಇಂತಹ ಕಳ್ಳರ ಸಂತೆಯಲ್ಲಿ ನನಗೇನು ಕೆಲಸ

ಎಚ್ಚರಿಕೆಯ ಫಲಕಗಳು…..

ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ…………..

ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ……

ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ……

ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ ಬೆಚ್ಚುತ್ತಾನೆ………

ಜನರ ನೂಕಾಟ ತಳ್ಳಾಟಗಳ ನಡುವೆ ತಲೆ ಎತ್ತಿ ನೋಡುತ್ತಾನೆ. ಅಲ್ಲಿ ಒಂದು ದೊಡ್ಡ ಬೋರ್ಡ (ಫಲಕ) ……

# ಕಳ್ಳರಿದ್ದಾರೆ ಎಚ್ಚರಿಕೆ # ……

ಆ ಯುವಕನಿಗೆ ಶಾಕ್. ರಾಜ್ಯದ ರಾಜಧಾನಿ ಬೆಂಗಳೂರಿನ ಮುಖ್ಯ ಬಸ್ ನಿಲ್ದಾಣದಲ್ಲಿ ಈ ಅಸಹ್ಯಕರವಾದ ಫಲಕ…….

ಛೆ,.. ಇರಲಾರದು, ಏನೋ ತಪ್ಪಾಗಿರಬೇಕು, ಬಸ್ ನಿಲ್ದಾಣದಲ್ಲಿ ಕಳ್ಳರೇ ! ಎಂದು ಭಾವಿಸಿ ಅಲ್ಲಿದ್ದ ಒಬ್ಬ ವ್ಯಕ್ತಿಯನ್ನು ಅದರ ಬಗ್ಗೆ ಕೇಳುತ್ತಾನೆ………

ಆ ವ್ಯಕ್ತಿ
“ಹೌದು ಸಾರ್ ಇಲ್ಲಿ ಕಳ್ಳರು – ಪಿಕ್ ಪಾಕೆಟರ್ಸ್ ಜಾಸ್ತಿ. ಕಣ್ಣುಮುಚ್ಚಿ ತಗೆಯೋದರೊಳಗೆ ಚಕ್ ಅಂತ ಎಗರಿಸಿಬಿಡುತ್ತಾರೆ. ನೀವ್ಯಾರೊ ಹೊಸಬರು ಇರಬೇಕು, ಹುಷಾರು, ಯಾಮಾರಿದ್ರೆ ನಿಮ್ ಚಡ್ಡೀನು
ಇರಲ್ಲ ” ……….

ಇದನ್ನು ಕೇಳಿ ಆ ಯುವಕನಿಗೆ ತಲೆತಿರುಗಿದಂತಾಯಿತು.
ಸತ್ಯ, ಅಹಿಂಸೆ, ಪ್ರಾಮಾಣಿಕತೆ, ನಂಬಿಕೆ, ದೇವರು, ಧರ್ಮ ಅಂತ ಇಡೀ ವಿಶ್ವಕ್ಕೇ ಆಧ್ಯಾತ್ಮಿಕ ಚಿಂತನೆ ಕೊಟ್ಟ ಜನ ನಾವು ಅಂತ ಹಿರಿಯರು ಹೇಳುತ್ತಾರೆ. ಪವಿತ್ರ ಗ್ರಂಥವೂ ಹೇಳುತ್ತೆ, ಆದರೆ ವಾಸ್ತವ ಬೇರೇನೆ ಇದೆ ಎಂದು ಯೋಚಿಸುತ್ತಾ, ಅಲ್ಲಿಯೇ ಇದ್ದ ಹೋಟೆಲ್ ಗೆ ತಿಂಡಿ ತಿನ್ನಲು ಹೋಗುತ್ತಾನೆ……….

ಖಾಲಿ ಇದ್ದ ಒಂದು ಟೇಬಲ್ಲಿನ ಮೇಲೆ ಕುಳಿತು ಬ್ಯಾಗ್ ಪಕ್ಕಕ್ಕಿರಿಸಿ ತಲೆ ಎತ್ತುತ್ತಾನೆ, ಅಲ್ಲಿ ಮತ್ತೊಂದು ಫಲಕ,…..

* ಎಚ್ಚರಿಕೆ, ನಿಮ್ಮ ವಸ್ತುಗಳಿಗೆ ನಾವು ಜವಾಬ್ದಾರರಲ್ಲ…… *

ಅರೆ, ನಾನು ಈ ಹೋಟಿಲ್ ನ ಅತಿಥಿ, ಗ್ರಾಹಕ, ನನ್ನ ವಸ್ತುಗಳಿಗೆ ಈ ಹೋಟೆಲ್ ಒಳಗಡೆ ಇವರು ಜವಾಬ್ದಾರರಾಗದೆ ಮತ್ಯಾರು ಆಗಬೇಕು. ಕನಿಷ್ಠ ಸೌಜನ್ಯ ಬೇಡವೇ, ನಮ್ಮ ವಸ್ತುಗಳು ಸೇಫ್ ಇರದ ಜಾಗದಲ್ಲಿ ಹೋಟೆಲ್ ಇದೆಯೇ?……

ಯೋಚಿಸುತ್ತಿರಬೇಕಾದರೆ,
ಏನು ತಿಂಡಿ ಬೇಕು ಎಂದು ಕೇಳಲು ಬಂದ ಮಾಣಿಯನ್ನೇ ಈ ಬಗ್ಗೆ ಕೇಳಿದ……

ಮಾಣಿ
“ಅಯ್ಯೋ ಸಾರ್ ಇಲ್ಲಿ ಕಳ್ಳರ ಕಾಟ ಜಾಸ್ತಿ. ಯಾರನ್ನೂ ನಂಬೋಹಾಗಿಲ್ಲ. ನೀವು ಸ್ವಲ್ಪ ಪಕ್ಕಕ್ಕೆ ತಿರುಗಿದರೆ ಸಾಕು ನಿಮ್ಮ ವಸ್ತು ಮಂಗ ಮಾಯ. ಎಲ್ಲಾ ಕಳ್ಳರೆ, ಅದಕ್ಕೆ ನಮಗ್ಯಾಕೆ ತಲೆ ನೋವು ಅಂತ ನಮ್ಮ ಹೋಟೆಲ್ ಯಜಮಾನರು ಬೋರ್ಡ್ ಹಾಕಿದ್ದಾರೆ .ಇದು ಇಲ್ಲೆಲ್ಲ ಕಾಮನ್ ಸಾರ್……… ”

ಯುವಕ ಕುಸಿದು ಬೀಳುವ ಹಂತ ತಲುಪುತ್ತಾನೆ……….

ಇಡ್ಲಿಗೆ ಆರ್ಡರ್ ಮಾಡಿ ಕೈ ತೊಳೆಯಲು ವಾಷ್ ಬೇಸಿನ್ ಬಳಿ ಬರುತ್ತಾನೆ, ಅಲ್ಲಿ ಇನ್ನೊಂದು ಬೋರ್ಡ…….

” ತಟ್ಟೆ, ಪ್ಲೇಟುಗಳಲ್ಲಿ ಕೈ ತೊಳೆಯಬೇಡಿ ”

ಯುವಕನಿಗೆ ಮತ್ತಷ್ಟು ಆಶ್ಚರ್ಯ,
ತಿಂಡಿ ಕೊಡಲು ಬಂದ ಮಾಣಿಯನ್ನು ಕೇಳುತ್ತಾನೆ,
ವಾಷ್ ಬೇಸಿನ್ ಇದ್ದರೂ ಈ ಫಲಕ ಯಾಕೆ ?………

ಮಾಣಿ
” ಅಯ್ಯೋ ನಮ್ಮ ಜನಕ್ಕೆ ಬುದ್ಧಿ ಇಲ್ಲ ಸಾರ್, ಎದ್ದೋಗಕ್ಕೂ ಸೋಮಾರಿತನ , ತಟ್ಟೆಯಲ್ಲಿ ಕೈ ತೊಳೆಯೋದು ಇರಲಿ ಅಲ್ಲೇ ಉಗಿದು ಬಿಡ್ತಾರೆ, ಥೂ ಏನ್ ಜನ. ಸಪ್ಲೈಯರ್ ಗಳೂ ಮನುಷ್ಯರು ಅಂತ. ತಿಳ್ಕೊಳಲ್ಲ, ಅದಕ್ಕೆ ಬೋರ್ಡ್……… ”

ಯುವಕ ತಿಂಡಿ ತಿಂದು ಬಿಲ್ ಕೊಡಲು ಕ್ಯಾಷ್ ಕೌಂಟರ್ ಬಳಿ ಬರುತ್ತಾನೆ, ಅಲ್ಲಿ ಮಗದೊಂದು ಬೋರ್ಡ್………

” ಸಾಲ ಕೇಳಿ ಸ್ನೇಹ ಕಳೆದುಕೊಳ್ಳಬೇಡಿ.”

ಈ ಭಾರಿ ಆತ ಯಾರನ್ನೂ ಪ್ರಶ್ನಿಸುವುದಿಲ್ಲ. ತನ್ನನ್ನೇ ಪ್ರಶ್ನಿಸಿಕೊಳ್ಳುತ್ತಾನೆ……

ಮಾನವ ಅನಾಗರಿಕತೆಯಿಂದ ನಾಗರಿಕತೆಯತ್ತ ಎಂದು ನಾವು ಭಾವಿಸಿದ್ದೇವೆ, ಆದರೆ ವಾಸ್ತವದಲ್ಲಿ ನಾವು ಸಾಗುತ್ತಿರುವುದು ನಾಗರಿಕತೆಯಿಂದ ಅನಾಗರಿಕತೆಯತ್ತ…………

ಇಂತಹ ಕಳ್ಳರ ಸಂತೆಯಲ್ಲಿ ನನಗೇನು ಕೆಲಸ. ಈ ಊರಿನ ಸಹವಾಸವೇ ಬೇಡ ಎಂದು ಆತ ವಾಪಸ್ ಆಗಲು ತಕ್ಷಣ ಬಸ್ ಹತ್ತುತ್ತಾನೆ…….

ಆತ ಕೇವಲ ಬಸ್ ನಿಲ್ದಾಣದ ಅನುಭವಗಳನ್ನು ನೋಡಿಯೇ ಊರಿಗೆ ವಾಪಸ್ ಹೋಗಲು ನಿಶ್ಚಯಿಸುತ್ತಾನೆ. ಒಂದು ವೇಳೆ ಇಡೀ ದಿನ ಬೆಂಗಳೂರನ್ನು ಸುತ್ತಿದ್ದರೆ ಆತನ ಮನಸ್ಥಿತಿ ಏನಾಗುತ್ತಿತ್ತು ಏನೋ. ಮೊದಲಿಗೆ ಆತನ ಮೊಬೈಲ್ ಮತ್ತು ಹಣ ಕಳವಾಗುತ್ತಿತ್ತು. ನಂತರ ಇಲ್ಲಿನ ಗಾಳಿ, ನೀರು, ಧೂಳು, ಟ್ರಾಫಿಕ್ ಕಿರಿಕಿರಿಗೆ ಆತನ ಜೀವವೇ ಹೋಗುತ್ತಿತ್ತು. ಇನ್ನೂ ಹೇಳುತ್ತಾ ಹೋದರೆ ಓದುಗರೇ ಬೇಸರ ಪಟ್ಟುಕೊಳ್ಳಬಹುದು…..

ಅನಿವಾರ್ಯವಾಗಿ ನಾವು ಮಾತ್ರ ಇಲ್ಲಿಯೇ, ಇಂತಹ ವಾತಾವರಣದಲ್ಲಿಯೇ ಸಹಿಸಿಕೊಂಡು ಬದುಕುತ್ತಿದ್ದೇವೆ…….

ಬದಲಾವಣೆಯ ಅವಶ್ಯಕತೆ ತುಂಬಾ ಇದೆ,
ನಮ್ಮ ಮಕ್ಕಳ ಭವಿಷ್ಯಕ್ಕಾಗಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

18 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

18 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

23 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago