ಎಚ್ಚರಿಕೆಯ ಫಲಕಗಳು…..
ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ…………..
ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ……
ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ……
ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ ಬೆಚ್ಚುತ್ತಾನೆ………
ಜನರ ನೂಕಾಟ ತಳ್ಳಾಟಗಳ ನಡುವೆ ತಲೆ ಎತ್ತಿ ನೋಡುತ್ತಾನೆ. ಅಲ್ಲಿ ಒಂದು ದೊಡ್ಡ ಬೋರ್ಡ (ಫಲಕ) ……
# ಕಳ್ಳರಿದ್ದಾರೆ ಎಚ್ಚರಿಕೆ # ……
ಆ ಯುವಕನಿಗೆ ಶಾಕ್. ರಾಜ್ಯದ ರಾಜಧಾನಿ ಬೆಂಗಳೂರಿನ ಮುಖ್ಯ ಬಸ್ ನಿಲ್ದಾಣದಲ್ಲಿ ಈ ಅಸಹ್ಯಕರವಾದ ಫಲಕ…….
ಛೆ,.. ಇರಲಾರದು, ಏನೋ ತಪ್ಪಾಗಿರಬೇಕು, ಬಸ್ ನಿಲ್ದಾಣದಲ್ಲಿ ಕಳ್ಳರೇ ! ಎಂದು ಭಾವಿಸಿ ಅಲ್ಲಿದ್ದ ಒಬ್ಬ ವ್ಯಕ್ತಿಯನ್ನು ಅದರ ಬಗ್ಗೆ ಕೇಳುತ್ತಾನೆ………
ಆ ವ್ಯಕ್ತಿ
“ಹೌದು ಸಾರ್ ಇಲ್ಲಿ ಕಳ್ಳರು – ಪಿಕ್ ಪಾಕೆಟರ್ಸ್ ಜಾಸ್ತಿ. ಕಣ್ಣುಮುಚ್ಚಿ ತಗೆಯೋದರೊಳಗೆ ಚಕ್ ಅಂತ ಎಗರಿಸಿಬಿಡುತ್ತಾರೆ. ನೀವ್ಯಾರೊ ಹೊಸಬರು ಇರಬೇಕು, ಹುಷಾರು, ಯಾಮಾರಿದ್ರೆ ನಿಮ್ ಚಡ್ಡೀನು
ಇರಲ್ಲ ” ……….
ಇದನ್ನು ಕೇಳಿ ಆ ಯುವಕನಿಗೆ ತಲೆತಿರುಗಿದಂತಾಯಿತು.
ಸತ್ಯ, ಅಹಿಂಸೆ, ಪ್ರಾಮಾಣಿಕತೆ, ನಂಬಿಕೆ, ದೇವರು, ಧರ್ಮ ಅಂತ ಇಡೀ ವಿಶ್ವಕ್ಕೇ ಆಧ್ಯಾತ್ಮಿಕ ಚಿಂತನೆ ಕೊಟ್ಟ ಜನ ನಾವು ಅಂತ ಹಿರಿಯರು ಹೇಳುತ್ತಾರೆ. ಪವಿತ್ರ ಗ್ರಂಥವೂ ಹೇಳುತ್ತೆ, ಆದರೆ ವಾಸ್ತವ ಬೇರೇನೆ ಇದೆ ಎಂದು ಯೋಚಿಸುತ್ತಾ, ಅಲ್ಲಿಯೇ ಇದ್ದ ಹೋಟೆಲ್ ಗೆ ತಿಂಡಿ ತಿನ್ನಲು ಹೋಗುತ್ತಾನೆ……….
ಖಾಲಿ ಇದ್ದ ಒಂದು ಟೇಬಲ್ಲಿನ ಮೇಲೆ ಕುಳಿತು ಬ್ಯಾಗ್ ಪಕ್ಕಕ್ಕಿರಿಸಿ ತಲೆ ಎತ್ತುತ್ತಾನೆ, ಅಲ್ಲಿ ಮತ್ತೊಂದು ಫಲಕ,…..
* ಎಚ್ಚರಿಕೆ, ನಿಮ್ಮ ವಸ್ತುಗಳಿಗೆ ನಾವು ಜವಾಬ್ದಾರರಲ್ಲ…… *
ಅರೆ, ನಾನು ಈ ಹೋಟಿಲ್ ನ ಅತಿಥಿ, ಗ್ರಾಹಕ, ನನ್ನ ವಸ್ತುಗಳಿಗೆ ಈ ಹೋಟೆಲ್ ಒಳಗಡೆ ಇವರು ಜವಾಬ್ದಾರರಾಗದೆ ಮತ್ಯಾರು ಆಗಬೇಕು. ಕನಿಷ್ಠ ಸೌಜನ್ಯ ಬೇಡವೇ, ನಮ್ಮ ವಸ್ತುಗಳು ಸೇಫ್ ಇರದ ಜಾಗದಲ್ಲಿ ಹೋಟೆಲ್ ಇದೆಯೇ?……
ಯೋಚಿಸುತ್ತಿರಬೇಕಾದರೆ,
ಏನು ತಿಂಡಿ ಬೇಕು ಎಂದು ಕೇಳಲು ಬಂದ ಮಾಣಿಯನ್ನೇ ಈ ಬಗ್ಗೆ ಕೇಳಿದ……
ಮಾಣಿ
“ಅಯ್ಯೋ ಸಾರ್ ಇಲ್ಲಿ ಕಳ್ಳರ ಕಾಟ ಜಾಸ್ತಿ. ಯಾರನ್ನೂ ನಂಬೋಹಾಗಿಲ್ಲ. ನೀವು ಸ್ವಲ್ಪ ಪಕ್ಕಕ್ಕೆ ತಿರುಗಿದರೆ ಸಾಕು ನಿಮ್ಮ ವಸ್ತು ಮಂಗ ಮಾಯ. ಎಲ್ಲಾ ಕಳ್ಳರೆ, ಅದಕ್ಕೆ ನಮಗ್ಯಾಕೆ ತಲೆ ನೋವು ಅಂತ ನಮ್ಮ ಹೋಟೆಲ್ ಯಜಮಾನರು ಬೋರ್ಡ್ ಹಾಕಿದ್ದಾರೆ .ಇದು ಇಲ್ಲೆಲ್ಲ ಕಾಮನ್ ಸಾರ್……… ”
ಯುವಕ ಕುಸಿದು ಬೀಳುವ ಹಂತ ತಲುಪುತ್ತಾನೆ……….
ಇಡ್ಲಿಗೆ ಆರ್ಡರ್ ಮಾಡಿ ಕೈ ತೊಳೆಯಲು ವಾಷ್ ಬೇಸಿನ್ ಬಳಿ ಬರುತ್ತಾನೆ, ಅಲ್ಲಿ ಇನ್ನೊಂದು ಬೋರ್ಡ…….
” ತಟ್ಟೆ, ಪ್ಲೇಟುಗಳಲ್ಲಿ ಕೈ ತೊಳೆಯಬೇಡಿ ”
ಯುವಕನಿಗೆ ಮತ್ತಷ್ಟು ಆಶ್ಚರ್ಯ,
ತಿಂಡಿ ಕೊಡಲು ಬಂದ ಮಾಣಿಯನ್ನು ಕೇಳುತ್ತಾನೆ,
ವಾಷ್ ಬೇಸಿನ್ ಇದ್ದರೂ ಈ ಫಲಕ ಯಾಕೆ ?………
ಮಾಣಿ
” ಅಯ್ಯೋ ನಮ್ಮ ಜನಕ್ಕೆ ಬುದ್ಧಿ ಇಲ್ಲ ಸಾರ್, ಎದ್ದೋಗಕ್ಕೂ ಸೋಮಾರಿತನ , ತಟ್ಟೆಯಲ್ಲಿ ಕೈ ತೊಳೆಯೋದು ಇರಲಿ ಅಲ್ಲೇ ಉಗಿದು ಬಿಡ್ತಾರೆ, ಥೂ ಏನ್ ಜನ. ಸಪ್ಲೈಯರ್ ಗಳೂ ಮನುಷ್ಯರು ಅಂತ. ತಿಳ್ಕೊಳಲ್ಲ, ಅದಕ್ಕೆ ಬೋರ್ಡ್……… ”
ಯುವಕ ತಿಂಡಿ ತಿಂದು ಬಿಲ್ ಕೊಡಲು ಕ್ಯಾಷ್ ಕೌಂಟರ್ ಬಳಿ ಬರುತ್ತಾನೆ, ಅಲ್ಲಿ ಮಗದೊಂದು ಬೋರ್ಡ್………
” ಸಾಲ ಕೇಳಿ ಸ್ನೇಹ ಕಳೆದುಕೊಳ್ಳಬೇಡಿ.”
ಈ ಭಾರಿ ಆತ ಯಾರನ್ನೂ ಪ್ರಶ್ನಿಸುವುದಿಲ್ಲ. ತನ್ನನ್ನೇ ಪ್ರಶ್ನಿಸಿಕೊಳ್ಳುತ್ತಾನೆ……
ಮಾನವ ಅನಾಗರಿಕತೆಯಿಂದ ನಾಗರಿಕತೆಯತ್ತ ಎಂದು ನಾವು ಭಾವಿಸಿದ್ದೇವೆ, ಆದರೆ ವಾಸ್ತವದಲ್ಲಿ ನಾವು ಸಾಗುತ್ತಿರುವುದು ನಾಗರಿಕತೆಯಿಂದ ಅನಾಗರಿಕತೆಯತ್ತ…………
ಇಂತಹ ಕಳ್ಳರ ಸಂತೆಯಲ್ಲಿ ನನಗೇನು ಕೆಲಸ. ಈ ಊರಿನ ಸಹವಾಸವೇ ಬೇಡ ಎಂದು ಆತ ವಾಪಸ್ ಆಗಲು ತಕ್ಷಣ ಬಸ್ ಹತ್ತುತ್ತಾನೆ…….
ಆತ ಕೇವಲ ಬಸ್ ನಿಲ್ದಾಣದ ಅನುಭವಗಳನ್ನು ನೋಡಿಯೇ ಊರಿಗೆ ವಾಪಸ್ ಹೋಗಲು ನಿಶ್ಚಯಿಸುತ್ತಾನೆ. ಒಂದು ವೇಳೆ ಇಡೀ ದಿನ ಬೆಂಗಳೂರನ್ನು ಸುತ್ತಿದ್ದರೆ ಆತನ ಮನಸ್ಥಿತಿ ಏನಾಗುತ್ತಿತ್ತು ಏನೋ. ಮೊದಲಿಗೆ ಆತನ ಮೊಬೈಲ್ ಮತ್ತು ಹಣ ಕಳವಾಗುತ್ತಿತ್ತು. ನಂತರ ಇಲ್ಲಿನ ಗಾಳಿ, ನೀರು, ಧೂಳು, ಟ್ರಾಫಿಕ್ ಕಿರಿಕಿರಿಗೆ ಆತನ ಜೀವವೇ ಹೋಗುತ್ತಿತ್ತು. ಇನ್ನೂ ಹೇಳುತ್ತಾ ಹೋದರೆ ಓದುಗರೇ ಬೇಸರ ಪಟ್ಟುಕೊಳ್ಳಬಹುದು…..
ಅನಿವಾರ್ಯವಾಗಿ ನಾವು ಮಾತ್ರ ಇಲ್ಲಿಯೇ, ಇಂತಹ ವಾತಾವರಣದಲ್ಲಿಯೇ ಸಹಿಸಿಕೊಂಡು ಬದುಕುತ್ತಿದ್ದೇವೆ…….
ಬದಲಾವಣೆಯ ಅವಶ್ಯಕತೆ ತುಂಬಾ ಇದೆ,
ನಮ್ಮ ಮಕ್ಕಳ ಭವಿಷ್ಯಕ್ಕಾಗಿ…..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…