ಎಚ್‌ಸಿಎಲ್‌ ಟೆಕ್‌ ಕಂಪನಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಎಚ್‌ಸಿಎಲ್‌ ಟೆಕ್‌ ಕಂಪನಿಯೂ ದ್ವಿತೀಯ ಪಿಯುಸಿ ಮುಗಿಸಿದ ಅಥವಾ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಲು “ಟೆಕ್‌ಬೀ” ಕಾರ್ಯಕ್ರಮದ ಅಡಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

2017 ರಿಂದಲೂ, ಟೆಕ್‌ಬೀ ಕಾರ್ಯಕ್ರಮದ ಅಡಿಯಲ್ಲಿ ಎಚ್‌ಸಿಎಲ್‌ ಟೆಕ್‌ ಕಂಪನಿಯು ಸಾವಿರಾರು ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ನೀಡಿ, ಅರ್ಹರಿಗೆ ಉದ್ಯೋಗವಾಶವನ್ನೂ ನೀಡಿದೆ. ಇದೀಗ ಈ ವರ್ಷದ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದೇಶದ ಎಲ್ಲಾ ರಾಜ್ಯಗಳಲ್ಲೂ ಎಚ್‌ಸಿಎಲ್‌ ಟೆಕ್‌ ಕಂಪನಿಯು ತರಬೇತಿ ನೀಡಲಿದೆ. ತರಬೇತಿ ಪಡೆಯುವ ವೇಳೆ ಅವರಿಗೆ ಉದ್ಯೋಗ ಕೌಶಲ್ಯಗಳನ್ನು ಒದಗಿಸಿ, ಪ್ರಮುಖ ಜಾಗತಿಕ ಕಂಪನಿಗಳಿಗೆ ಪ್ರಾಜೆಕ್ಟ್‌ಗಳನ್ನು ಮಾಡುವ ಅವಕಾಶಗಳನ್ನೂ ಸಹ ಅರ್ಹ ಅಭ್ಯ್ರಥಿಗಳಿಗೆ ನೀಡಲಾಗುತ್ತದೆ.

ಇದಷ್ಟೇ ಅಲ್ಲದೆ, ಬಿಐಟಿಎಸ್ ಪಿಲಾನಿ, ಐಐಟಿ ಕೊಟ್ಟಾಯಮ್‌, ಶಾಸ್ತ್ರ ಯುನಿವರ್ಸಿಟಿ ಮತ್ತು ಅಮಿಟಿ ಯುನಿವರ್ಸಿಟಿ ಆನ್‌ಲೈನ್‌ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಅರೆಕಾಲಿಕವಾಗಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಲಾಗುತ್ತದೆ. ಜೊತೆಗೆ, ನ್ಯಾಷನಲ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ (NSDC) ಮತ್ತು ವಿವಿಧ ರಾಜ್ಯ ಕೌಶಲ ಅಭಿವೃದ್ಧಿ ಕಾರ್ಪೊರೇಶನ್‌ಗಳ ಜೊತೆಗೆ HCLTech ಪಾಲುದಾರಿಕೆ ಹೊಂದಿದ್ದು, ಅವಕಾಶವಂಚಿತ ಹಿನ್ನೆಲೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡಲು ಸಹಕಾರ ನೀಡಲಿದೆ. ಅರ್ಜಿ ಸಲ್ಲಿಸಲು ಆಸಕ್ತರು www.hcltechbee.com ವೆಬ್‌ಸೈಟ್‌ಗೆ ಭೇಟಿ ನೀಡಿ.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

5 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago