ಎಚ್‌ಸಿಎಲ್‌ ಟೆಕ್‌ ಕಂಪನಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಎಚ್‌ಸಿಎಲ್‌ ಟೆಕ್‌ ಕಂಪನಿಯೂ ದ್ವಿತೀಯ ಪಿಯುಸಿ ಮುಗಿಸಿದ ಅಥವಾ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಲು “ಟೆಕ್‌ಬೀ” ಕಾರ್ಯಕ್ರಮದ ಅಡಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

2017 ರಿಂದಲೂ, ಟೆಕ್‌ಬೀ ಕಾರ್ಯಕ್ರಮದ ಅಡಿಯಲ್ಲಿ ಎಚ್‌ಸಿಎಲ್‌ ಟೆಕ್‌ ಕಂಪನಿಯು ಸಾವಿರಾರು ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ನೀಡಿ, ಅರ್ಹರಿಗೆ ಉದ್ಯೋಗವಾಶವನ್ನೂ ನೀಡಿದೆ. ಇದೀಗ ಈ ವರ್ಷದ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದೇಶದ ಎಲ್ಲಾ ರಾಜ್ಯಗಳಲ್ಲೂ ಎಚ್‌ಸಿಎಲ್‌ ಟೆಕ್‌ ಕಂಪನಿಯು ತರಬೇತಿ ನೀಡಲಿದೆ. ತರಬೇತಿ ಪಡೆಯುವ ವೇಳೆ ಅವರಿಗೆ ಉದ್ಯೋಗ ಕೌಶಲ್ಯಗಳನ್ನು ಒದಗಿಸಿ, ಪ್ರಮುಖ ಜಾಗತಿಕ ಕಂಪನಿಗಳಿಗೆ ಪ್ರಾಜೆಕ್ಟ್‌ಗಳನ್ನು ಮಾಡುವ ಅವಕಾಶಗಳನ್ನೂ ಸಹ ಅರ್ಹ ಅಭ್ಯ್ರಥಿಗಳಿಗೆ ನೀಡಲಾಗುತ್ತದೆ.

ಇದಷ್ಟೇ ಅಲ್ಲದೆ, ಬಿಐಟಿಎಸ್ ಪಿಲಾನಿ, ಐಐಟಿ ಕೊಟ್ಟಾಯಮ್‌, ಶಾಸ್ತ್ರ ಯುನಿವರ್ಸಿಟಿ ಮತ್ತು ಅಮಿಟಿ ಯುನಿವರ್ಸಿಟಿ ಆನ್‌ಲೈನ್‌ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಅರೆಕಾಲಿಕವಾಗಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಲಾಗುತ್ತದೆ. ಜೊತೆಗೆ, ನ್ಯಾಷನಲ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ (NSDC) ಮತ್ತು ವಿವಿಧ ರಾಜ್ಯ ಕೌಶಲ ಅಭಿವೃದ್ಧಿ ಕಾರ್ಪೊರೇಶನ್‌ಗಳ ಜೊತೆಗೆ HCLTech ಪಾಲುದಾರಿಕೆ ಹೊಂದಿದ್ದು, ಅವಕಾಶವಂಚಿತ ಹಿನ್ನೆಲೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡಲು ಸಹಕಾರ ನೀಡಲಿದೆ. ಅರ್ಜಿ ಸಲ್ಲಿಸಲು ಆಸಕ್ತರು www.hcltechbee.com ವೆಬ್‌ಸೈಟ್‌ಗೆ ಭೇಟಿ ನೀಡಿ.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

3 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

15 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

16 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

16 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

19 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

1 day ago