ಬೆಂಗಳೂರು: ಎಚ್ಸಿಎಲ್ ಟೆಕ್ ಕಂಪನಿಯೂ ದ್ವಿತೀಯ ಪಿಯುಸಿ ಮುಗಿಸಿದ ಅಥವಾ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಲು “ಟೆಕ್ಬೀ” ಕಾರ್ಯಕ್ರಮದ ಅಡಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
2017 ರಿಂದಲೂ, ಟೆಕ್ಬೀ ಕಾರ್ಯಕ್ರಮದ ಅಡಿಯಲ್ಲಿ ಎಚ್ಸಿಎಲ್ ಟೆಕ್ ಕಂಪನಿಯು ಸಾವಿರಾರು ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ನೀಡಿ, ಅರ್ಹರಿಗೆ ಉದ್ಯೋಗವಾಶವನ್ನೂ ನೀಡಿದೆ. ಇದೀಗ ಈ ವರ್ಷದ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದೇಶದ ಎಲ್ಲಾ ರಾಜ್ಯಗಳಲ್ಲೂ ಎಚ್ಸಿಎಲ್ ಟೆಕ್ ಕಂಪನಿಯು ತರಬೇತಿ ನೀಡಲಿದೆ. ತರಬೇತಿ ಪಡೆಯುವ ವೇಳೆ ಅವರಿಗೆ ಉದ್ಯೋಗ ಕೌಶಲ್ಯಗಳನ್ನು ಒದಗಿಸಿ, ಪ್ರಮುಖ ಜಾಗತಿಕ ಕಂಪನಿಗಳಿಗೆ ಪ್ರಾಜೆಕ್ಟ್ಗಳನ್ನು ಮಾಡುವ ಅವಕಾಶಗಳನ್ನೂ ಸಹ ಅರ್ಹ ಅಭ್ಯ್ರಥಿಗಳಿಗೆ ನೀಡಲಾಗುತ್ತದೆ.
ಇದಷ್ಟೇ ಅಲ್ಲದೆ, ಬಿಐಟಿಎಸ್ ಪಿಲಾನಿ, ಐಐಟಿ ಕೊಟ್ಟಾಯಮ್, ಶಾಸ್ತ್ರ ಯುನಿವರ್ಸಿಟಿ ಮತ್ತು ಅಮಿಟಿ ಯುನಿವರ್ಸಿಟಿ ಆನ್ಲೈನ್ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಅರೆಕಾಲಿಕವಾಗಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಲಾಗುತ್ತದೆ. ಜೊತೆಗೆ, ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೊರೇಶನ್ (NSDC) ಮತ್ತು ವಿವಿಧ ರಾಜ್ಯ ಕೌಶಲ ಅಭಿವೃದ್ಧಿ ಕಾರ್ಪೊರೇಶನ್ಗಳ ಜೊತೆಗೆ HCLTech ಪಾಲುದಾರಿಕೆ ಹೊಂದಿದ್ದು, ಅವಕಾಶವಂಚಿತ ಹಿನ್ನೆಲೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡಲು ಸಹಕಾರ ನೀಡಲಿದೆ. ಅರ್ಜಿ ಸಲ್ಲಿಸಲು ಆಸಕ್ತರು www.hcltechbee.com ವೆಬ್ಸೈಟ್ಗೆ ಭೇಟಿ ನೀಡಿ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…