ಎಚ್‌ಸಿಎಲ್‌ ಟೆಕ್‌ ಕಂಪನಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಎಚ್‌ಸಿಎಲ್‌ ಟೆಕ್‌ ಕಂಪನಿಯೂ ದ್ವಿತೀಯ ಪಿಯುಸಿ ಮುಗಿಸಿದ ಅಥವಾ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಲು “ಟೆಕ್‌ಬೀ” ಕಾರ್ಯಕ್ರಮದ ಅಡಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

2017 ರಿಂದಲೂ, ಟೆಕ್‌ಬೀ ಕಾರ್ಯಕ್ರಮದ ಅಡಿಯಲ್ಲಿ ಎಚ್‌ಸಿಎಲ್‌ ಟೆಕ್‌ ಕಂಪನಿಯು ಸಾವಿರಾರು ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ನೀಡಿ, ಅರ್ಹರಿಗೆ ಉದ್ಯೋಗವಾಶವನ್ನೂ ನೀಡಿದೆ. ಇದೀಗ ಈ ವರ್ಷದ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದೇಶದ ಎಲ್ಲಾ ರಾಜ್ಯಗಳಲ್ಲೂ ಎಚ್‌ಸಿಎಲ್‌ ಟೆಕ್‌ ಕಂಪನಿಯು ತರಬೇತಿ ನೀಡಲಿದೆ. ತರಬೇತಿ ಪಡೆಯುವ ವೇಳೆ ಅವರಿಗೆ ಉದ್ಯೋಗ ಕೌಶಲ್ಯಗಳನ್ನು ಒದಗಿಸಿ, ಪ್ರಮುಖ ಜಾಗತಿಕ ಕಂಪನಿಗಳಿಗೆ ಪ್ರಾಜೆಕ್ಟ್‌ಗಳನ್ನು ಮಾಡುವ ಅವಕಾಶಗಳನ್ನೂ ಸಹ ಅರ್ಹ ಅಭ್ಯ್ರಥಿಗಳಿಗೆ ನೀಡಲಾಗುತ್ತದೆ.

ಇದಷ್ಟೇ ಅಲ್ಲದೆ, ಬಿಐಟಿಎಸ್ ಪಿಲಾನಿ, ಐಐಟಿ ಕೊಟ್ಟಾಯಮ್‌, ಶಾಸ್ತ್ರ ಯುನಿವರ್ಸಿಟಿ ಮತ್ತು ಅಮಿಟಿ ಯುನಿವರ್ಸಿಟಿ ಆನ್‌ಲೈನ್‌ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಅರೆಕಾಲಿಕವಾಗಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಲಾಗುತ್ತದೆ. ಜೊತೆಗೆ, ನ್ಯಾಷನಲ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ (NSDC) ಮತ್ತು ವಿವಿಧ ರಾಜ್ಯ ಕೌಶಲ ಅಭಿವೃದ್ಧಿ ಕಾರ್ಪೊರೇಶನ್‌ಗಳ ಜೊತೆಗೆ HCLTech ಪಾಲುದಾರಿಕೆ ಹೊಂದಿದ್ದು, ಅವಕಾಶವಂಚಿತ ಹಿನ್ನೆಲೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡಲು ಸಹಕಾರ ನೀಡಲಿದೆ. ಅರ್ಜಿ ಸಲ್ಲಿಸಲು ಆಸಕ್ತರು www.hcltechbee.com ವೆಬ್‌ಸೈಟ್‌ಗೆ ಭೇಟಿ ನೀಡಿ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

13 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago