ಬೆಂಗಳೂರು: ಎಚ್ಸಿಎಲ್ ಟೆಕ್ ಕಂಪನಿಯೂ ದ್ವಿತೀಯ ಪಿಯುಸಿ ಮುಗಿಸಿದ ಅಥವಾ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಲು “ಟೆಕ್ಬೀ” ಕಾರ್ಯಕ್ರಮದ ಅಡಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
2017 ರಿಂದಲೂ, ಟೆಕ್ಬೀ ಕಾರ್ಯಕ್ರಮದ ಅಡಿಯಲ್ಲಿ ಎಚ್ಸಿಎಲ್ ಟೆಕ್ ಕಂಪನಿಯು ಸಾವಿರಾರು ವಿದ್ಯಾರ್ಥಿಗಳಿಗೆ ಈಗಾಗಲೇ ತರಬೇತಿ ನೀಡಿ, ಅರ್ಹರಿಗೆ ಉದ್ಯೋಗವಾಶವನ್ನೂ ನೀಡಿದೆ. ಇದೀಗ ಈ ವರ್ಷದ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದೇಶದ ಎಲ್ಲಾ ರಾಜ್ಯಗಳಲ್ಲೂ ಎಚ್ಸಿಎಲ್ ಟೆಕ್ ಕಂಪನಿಯು ತರಬೇತಿ ನೀಡಲಿದೆ. ತರಬೇತಿ ಪಡೆಯುವ ವೇಳೆ ಅವರಿಗೆ ಉದ್ಯೋಗ ಕೌಶಲ್ಯಗಳನ್ನು ಒದಗಿಸಿ, ಪ್ರಮುಖ ಜಾಗತಿಕ ಕಂಪನಿಗಳಿಗೆ ಪ್ರಾಜೆಕ್ಟ್ಗಳನ್ನು ಮಾಡುವ ಅವಕಾಶಗಳನ್ನೂ ಸಹ ಅರ್ಹ ಅಭ್ಯ್ರಥಿಗಳಿಗೆ ನೀಡಲಾಗುತ್ತದೆ.
ಇದಷ್ಟೇ ಅಲ್ಲದೆ, ಬಿಐಟಿಎಸ್ ಪಿಲಾನಿ, ಐಐಟಿ ಕೊಟ್ಟಾಯಮ್, ಶಾಸ್ತ್ರ ಯುನಿವರ್ಸಿಟಿ ಮತ್ತು ಅಮಿಟಿ ಯುನಿವರ್ಸಿಟಿ ಆನ್ಲೈನ್ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಅರೆಕಾಲಿಕವಾಗಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಲಾಗುತ್ತದೆ. ಜೊತೆಗೆ, ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೊರೇಶನ್ (NSDC) ಮತ್ತು ವಿವಿಧ ರಾಜ್ಯ ಕೌಶಲ ಅಭಿವೃದ್ಧಿ ಕಾರ್ಪೊರೇಶನ್ಗಳ ಜೊತೆಗೆ HCLTech ಪಾಲುದಾರಿಕೆ ಹೊಂದಿದ್ದು, ಅವಕಾಶವಂಚಿತ ಹಿನ್ನೆಲೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡಲು ಸಹಕಾರ ನೀಡಲಿದೆ. ಅರ್ಜಿ ಸಲ್ಲಿಸಲು ಆಸಕ್ತರು www.hcltechbee.com ವೆಬ್ಸೈಟ್ಗೆ ಭೇಟಿ ನೀಡಿ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…