ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ದೇವರಲ್ಲಿ ಹರಕೆ ತೀರಿಸಿದರು.
ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿ ಅಯ್ಕೆಯಾದರೆ ಸುಬ್ರಹ್ಮಣ್ಯ ದೇವರಿಗೆ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಮಾಡಿಕೊಂಡಿದ್ದ ಅಭಿಮಾನಿಗಳು, ಸೋಮವಾರ ಬೆಳಗ್ಗೆ ದೇವಾಲಯದ ಮುಂಭಾಗದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರ ನೇತೃತ್ವದಲ್ಲಿ , ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ಮಾಜಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರು ಮಾತನಾಡಿ, ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಬಂದಿರುವುದು ಹಾಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿರುವುದರ ಜೊತೆಗೆ ನಮ್ಮ ನಾಯಕರದ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿ ಆಗಿರುವುದು ನಮಗೆ ಬಹಳ ಸಂತೋಷವಾಗಿದೆ ಎಂದರು.
ಈ ವೇಳೆ ಹಳ್ಳಿ ರೈತ ಅಂಬರೀಷ್, ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ, ಶ್ರೀಧರ್, ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…