ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ದೇವರಲ್ಲಿ ಹರಕೆ ತೀರಿಸಿದರು.
ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿ ಅಯ್ಕೆಯಾದರೆ ಸುಬ್ರಹ್ಮಣ್ಯ ದೇವರಿಗೆ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಮಾಡಿಕೊಂಡಿದ್ದ ಅಭಿಮಾನಿಗಳು, ಸೋಮವಾರ ಬೆಳಗ್ಗೆ ದೇವಾಲಯದ ಮುಂಭಾಗದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರ ನೇತೃತ್ವದಲ್ಲಿ , ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ಮಾಜಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರು ಮಾತನಾಡಿ, ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಬಂದಿರುವುದು ಹಾಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿರುವುದರ ಜೊತೆಗೆ ನಮ್ಮ ನಾಯಕರದ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿ ಆಗಿರುವುದು ನಮಗೆ ಬಹಳ ಸಂತೋಷವಾಗಿದೆ ಎಂದರು.
ಈ ವೇಳೆ ಹಳ್ಳಿ ರೈತ ಅಂಬರೀಷ್, ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ, ಶ್ರೀಧರ್, ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…